ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಇಂದು ರಾಜ್ಯದ ಹಲವು ಭಾಗಗಳಲ್ಲಿ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆ ಆಗಿದೆ. ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಏರಿಕೆಯಾಗಿದ್ದ ಉಷ್ಣಾಂಶವು ಹದವಾದ ಮಳೆಗೆ ತಂಪಾಯಿತು.
ಮಂಗಳವಾರ ಸಂಜೆ ದಿಢೀರ್ ಸುರಿದ ಮಳೆಯಿಂದ ಜನ ಹರ್ಷಗೊಂಡರು. ಕೆಲವರು ಮಳೆಯಲ್ಲಿ ನೆನೆದರೆ, ಹಲವರು ಮಳೆಯಿಂದ ಮಳೆ ಹನಿಗಳಿಂದ ತಪ್ಪಿಸಿಕೊಳ್ಳಲು ಸೂರು ಹುಡುಕಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ಮಳೆಯು ರೈತರಲ್ಲಿ ಹರ್ಷ ತರಿಸಿದೆ. ಮುಂಗಾರು ಪೂರ್ವದ ಮಳೆಯ ಆರ್ಭಟ ತುಸು ಜೋರಾಗಿಯೇ ಇತ್ತು. ಗುಡುಗು, ಮಿಂಚುಗಳ ಜತೆಗೆ ಆರ್ಭಟಿಸಿದ ಸಿಡಿಲುಗಳಿಂದ ಮಕ್ಕಳು ಬೆದರಿದರು.
ತುಂತುರು ಮಳೆಗೆ ನೆನೆದ ಭೂಮಿಯ ಮಣ್ಣಿನ ಸುವಾಸನೆ ಮೂಗನ್ನು ಪುಳಕಗೊಳಿಸಿತು.
ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…
ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…
ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…
ದೊಡ್ಡಬಳ್ಳಾಪುರ: ತಾಲೂಕಿನ ಕೋಡಿಗೆಹಳ್ಳಿಯಲ್ಲಿರುವ ಆತ್ರೇಯ ಆಯುರ್ವೇದ ಕಾಲೇಜು ಆಡಳಿತ ಮಂಡಳಿಯು ಬ್ಯಾಂಕ್ ಸಾಲ ಮರುಪಾವತಿಸದ ಹಿನ್ನೆಲೆಯಲ್ಲಿ ಕಾಲೇಜಿಗೆ ಬೀಗ…
ತಮಿಳುನಾಡಿಗೆ ನಿತ್ಯ 6 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ CWRC ನೀಡಿರುವ ಆದೇಶ ಅಸಂಬದ್ಧವಾಗಿದ್ದು, ಅತ್ಯಂತ ನೋವು ಹಾಗೂ…
ದೊಡ್ಡಬಳ್ಳಾಪುರ: ನಗರದ ವಿನಾಯಕನಗರದ ಸರ್ಕಾರಿ ಪ್ರಾಥಮಿಕ ಶಾಲೆ ಸಮೀಪದಲ್ಲಿರುವ ರಾಜಕಾಲುವೆಗೆ ಅಡ್ಡಲಾಗಿ ನಿರ್ಮಿಸಿರುವ ಮೋರಿ ಬಳಿ ತ್ಯಾಜ್ಯ ರಾಶಿ ಬಿದ್ದಿದ್ದು,…