ಬಿಸಿಲಿನ ತಾಪ ಹೆಚ್ಚಾಗುತ್ತಿದ್ದ ಸಂದರ್ಭದಲ್ಲಿ ದೊಡ್ಡಬಳ್ಳಾಪುರ ನಗರದ ಕೆಲವು ಪ್ರದೇಶಗಳಲ್ಲಿ ಮಂಗಳವಾರ ಸಂಜೆ ವರ್ಷದ ಮೊದಲ ಮಳೆ ಸುರಿಯಿತು.
ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಹಿನ್ನೆಲೆ ಇಂದು ರಾಜ್ಯದ ಹಲವು ಭಾಗಗಳಲ್ಲಿ ಆಲಿಕಲ್ಲು, ಗುಡುಗು, ಮಿಂಚು ಸಹಿತ ಮಳೆ ಆಗಿದೆ. ಕಳೆದ ಕೆಲವು ದಿನಗಳಿಂದ ವಾತಾವರಣದಲ್ಲಿ ಏರಿಕೆಯಾಗಿದ್ದ ಉಷ್ಣಾಂಶವು ಹದವಾದ ಮಳೆಗೆ ತಂಪಾಯಿತು.
ಮಂಗಳವಾರ ಸಂಜೆ ದಿಢೀರ್ ಸುರಿದ ಮಳೆಯಿಂದ ಜನ ಹರ್ಷಗೊಂಡರು. ಕೆಲವರು ಮಳೆಯಲ್ಲಿ ನೆನೆದರೆ, ಹಲವರು ಮಳೆಯಿಂದ ಮಳೆ ಹನಿಗಳಿಂದ ತಪ್ಪಿಸಿಕೊಳ್ಳಲು ಸೂರು ಹುಡುಕಾಡಿದರು.
ಗ್ರಾಮೀಣ ಪ್ರದೇಶಗಳಲ್ಲಿ ಬಿದ್ದಿರುವ ಮಳೆಯು ರೈತರಲ್ಲಿ ಹರ್ಷ ತರಿಸಿದೆ. ಮುಂಗಾರು ಪೂರ್ವದ ಮಳೆಯ ಆರ್ಭಟ ತುಸು ಜೋರಾಗಿಯೇ ಇತ್ತು. ಗುಡುಗು, ಮಿಂಚುಗಳ ಜತೆಗೆ ಆರ್ಭಟಿಸಿದ ಸಿಡಿಲುಗಳಿಂದ ಮಕ್ಕಳು ಬೆದರಿದರು.
ತುಂತುರು ಮಳೆಗೆ ನೆನೆದ ಭೂಮಿಯ ಮಣ್ಣಿನ ಸುವಾಸನೆ ಮೂಗನ್ನು ಪುಳಕಗೊಳಿಸಿತು.
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…