ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ಯು ಎರಡು ರನ್ ಗಳಿಂದ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಸ್ಫೋಟಕ ಆರಂಭಿಕ ಫಿಲ್ ಸಾಲ್ಟ್ ರ ಅನುಪಸ್ಥಿತಿಯಲ್ಲಿ ಬಂದ ಜಾಕೋಬ್ ಬೇತಲ್(55) ತಮ್ಮ ಚೊಚ್ಚಲ ಐ ಪಿ ಎಲ್ ಅರ್ಧ ಶತಕ ಸಿಡಿಸಿದರು. ಹಾಗು ವಿರಾಟ್ ಕೋಹ್ಲಿ (62) ಕೂಡ 5 ಫೋರ್ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಈ ಆವೃತ್ತಿಯ 7 ನೇ ಅರ್ಧಶತಕ ಗಳಿಸಿ ಔಟಾದರು.
ಕೊನೆಯ ಎರಡು ಓವರ್ ಗಳಲ್ಲಿ ಅಬ್ಬರಿಸಿದ ವೆಸ್ಟ್ ಇಂಡೀಸ್ ನ ದೈತ್ಯ ರೋಮೆರಿಯೋ ಶೆಪರ್ಡ್(53*) ಕೇವಲ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಿಡಿಸುವ ಮೂಲಕ ಆಕರ್ಷಕ ಅರ್ಧ ಶತಕದಿಂದ ತಂಡದ ಮೊತ್ತವನ್ನು 200 ರ ಗಡಿಯನ್ನು ತಲುಪಲು ಸಹಕರಿಸಿದರು.
ಈ ಮೂಲಕ ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 213 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಸಿ ಎಸ್ ಕೆ ಪರ ಮತೀಶ ಪತಿರಾಣ 3 ವಿಕೆಟ್ ಪಡೆದರು.
214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಯುವ ಬ್ಯಾಟರ್ ಆಯುಷ್ ಮಾತ್ರೆ(94) ತಮ್ಮ ಅತ್ಯುತ್ತಮ ಬ್ಯಾಟಿಂಗ್ ಶೈಲಿಯಿಂದ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿ ಚೊಚ್ಚಲ ಅರ್ಧ ಶತಕ ಗಳಿಸಿದರು. ಇವರ ಜೊತೆಗೆ ಜಡೇಜಾ(77) ಕೂಡ ಉತ್ತಮ ಸಾಥ್ ನೀಡಿದರು. ಆದರೆ ಕೊನೆಯ 3 ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಸಿ ಬಿ ಬೌಲರ್ ಗಳು ಪಂದ್ಯವನ್ನು ತಮ್ಮೆಡೆಗೆ ಸೆಳೆದುಕೊಂಡರು. ಅರ್ ಸಿ ಬಿ ಪರ ಪಾದಾರ್ಪಣೆ ಪಂದ್ಯವನ್ನು ಆಡಿದ ಲುಂಗಿ ಎನ್ ಗಿಡಿ 3 ವಿಕೆಟ್ ಪಡೆದು ಮಿಂಚಿದರು.
ದೊಡ್ಡಬಳ್ಳಾಪುರ ಕಾಂಗ್ರೆಸ್ ಕಾರ್ಮಿಕ ಘಟಕದ ನೂತನ ಅಧ್ಯಕ್ಷರನ್ನಾಗಿ ನರಸಿಂಹ ಮೂರ್ತಿ ಅವರನ್ನು ಅಧಿಕೃತವಾಗಿ ನೇಮಕ ಮಾಡಿದ್ದೇವೆ. ಅವರು ಪಕ್ಷಕ್ಕಾಗಿ ಹಗಲಿರುಳು…
ಕನ್ನಡಿಗರು ತಮ್ಮ ಬೆವರ ಗಳಿಕೆಯಿಂದ ನೀಡುವ ಒಂದು ರೂಪಾಯಿ ತೆರಿಗೆಗೆ ಪ್ರತಿಯಾಗಿ ಕೇಂದ್ರ ಸರ್ಕಾರ ಹದಿನೈದು ಪೈಸೆ ಮಾತ್ರ ವಾಪಸ್ಸು…
ಹಾಸನ ಜಿಲ್ಲೆ, ಚನ್ನರಾಯಪಟ್ಟಣ ತಾಲ್ಲೂಕಿನ, ಶ್ರವಣಬೆಳಗೊಳದಲ್ಲಿ ಪಾಪಿ ಪುತ್ರನೊಬ್ಬ ಮದುವೆ ಮಾಡಿಸಲಿಲ್ಲವೆಂದು ತಾಯಿಯನ್ನೇ ಕೊಲೆಗೈದಿದ್ದಾನೆ. ಗಂಗಮ್ಮ (65), ಕೊಲೆಯಾದ ಮಹಿಳೆ.…
ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರ ಅಧ್ಯಕ್ಷರಾದ ವಿ. ಶಾಂತಕುಮಾರ್ ಅವರ ಹುಟ್ಟುಹಬ್ಬ ಅರ್ಥಪೂರ್ಣವಾಗಿ ಆಚರಿಸಲಾಗಿದೆ. ಕಾಂಗ್ರೆಸ್…
ಹೋಟೆಲ್ ಬಿಲ್ ಕೇಳಿದ್ದಕ್ಕೆ ಮಾಲೀಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿರುವ ಘಟನೆ ದೊಡ್ಡಬಳ್ಳಾಪುರ ನಗರದ ದರ್ಗಾಜೋಗಿಹಳ್ಳಿ ಸಮೀಪದ ಹೋಟೆಲ್ ನಲ್ಲಿ…
ಡಿಪಿಎಲ್ ಸೀಸನ್-1 ದೊಡ್ಡಬಳ್ಳಾಪುರ ಪ್ರೀಮಿಯರ್ ಲೀಗ್ ಶಾರ್ಟ್ ಪಿಚ್ ಕ್ರಿಕೆಟ್ ಟೂರ್ನಮೆಂಟ್ ನ್ನು ಮೇ.9 ಮತ್ತು 10ರಂದು ಆಯೋಜನೆ ಮಾಡಲಾಗಿದೆ...…