Categories: IPL 2025

ರಣ ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್ ಸಿ ಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ಯು ಎರಡು ರನ್ ಗಳಿಂದ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಸ್ಫೋಟಕ ಆರಂಭಿಕ ಫಿಲ್ ಸಾಲ್ಟ್ ರ ಅನುಪಸ್ಥಿತಿಯಲ್ಲಿ ಬಂದ ಜಾಕೋಬ್ ಬೇತಲ್(55) ತಮ್ಮ ಚೊಚ್ಚಲ ಐ ಪಿ ಎಲ್ ಅರ್ಧ ಶತಕ ಸಿಡಿಸಿದರು. ಹಾಗು ವಿರಾಟ್ ಕೋಹ್ಲಿ (62) ಕೂಡ 5 ಫೋರ್ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಈ ಆವೃತ್ತಿಯ 7 ನೇ ಅರ್ಧಶತಕ ಗಳಿಸಿ ಔಟಾದರು.
ಕೊನೆಯ ಎರಡು ಓವರ್ ಗಳಲ್ಲಿ ಅಬ್ಬರಿಸಿದ ವೆಸ್ಟ್ ಇಂಡೀಸ್ ನ ದೈತ್ಯ ರೋಮೆರಿಯೋ ಶೆಪರ್ಡ್(53*) ಕೇವಲ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಿಡಿಸುವ ಮೂಲಕ ಆಕರ್ಷಕ ಅರ್ಧ ಶತಕದಿಂದ ತಂಡದ ಮೊತ್ತವನ್ನು 200 ರ ಗಡಿಯನ್ನು ತಲುಪಲು ಸಹಕರಿಸಿದರು.

ಈ ಮೂಲಕ ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 213 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಸಿ ಎಸ್ ಕೆ ಪರ ಮತೀಶ ಪತಿರಾಣ 3 ವಿಕೆಟ್ ಪಡೆದರು.

214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಯುವ ಬ್ಯಾಟರ್ ಆಯುಷ್ ಮಾತ್ರೆ(94) ತಮ್ಮ ಅತ್ಯುತ್ತಮ ಬ್ಯಾಟಿಂಗ್ ಶೈಲಿಯಿಂದ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿ ಚೊಚ್ಚಲ ಅರ್ಧ ಶತಕ ಗಳಿಸಿದರು. ಇವರ ಜೊತೆಗೆ ಜಡೇಜಾ(77) ಕೂಡ ಉತ್ತಮ ಸಾಥ್ ನೀಡಿದರು. ಆದರೆ ಕೊನೆಯ 3 ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಸಿ ಬಿ ಬೌಲರ್ ಗಳು ಪಂದ್ಯವನ್ನು ತಮ್ಮೆಡೆಗೆ ಸೆಳೆದುಕೊಂಡರು. ಅರ್ ಸಿ ಬಿ ಪರ ಪಾದಾರ್ಪಣೆ ಪಂದ್ಯವನ್ನು ಆಡಿದ ಲುಂಗಿ ಎನ್ ಗಿಡಿ 3 ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

2 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

4 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

5 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

18 hours ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

19 hours ago