Categories: IPL 2025

ರಣ ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್ ಸಿ ಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ಯು ಎರಡು ರನ್ ಗಳಿಂದ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಸ್ಫೋಟಕ ಆರಂಭಿಕ ಫಿಲ್ ಸಾಲ್ಟ್ ರ ಅನುಪಸ್ಥಿತಿಯಲ್ಲಿ ಬಂದ ಜಾಕೋಬ್ ಬೇತಲ್(55) ತಮ್ಮ ಚೊಚ್ಚಲ ಐ ಪಿ ಎಲ್ ಅರ್ಧ ಶತಕ ಸಿಡಿಸಿದರು. ಹಾಗು ವಿರಾಟ್ ಕೋಹ್ಲಿ (62) ಕೂಡ 5 ಫೋರ್ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಈ ಆವೃತ್ತಿಯ 7 ನೇ ಅರ್ಧಶತಕ ಗಳಿಸಿ ಔಟಾದರು.
ಕೊನೆಯ ಎರಡು ಓವರ್ ಗಳಲ್ಲಿ ಅಬ್ಬರಿಸಿದ ವೆಸ್ಟ್ ಇಂಡೀಸ್ ನ ದೈತ್ಯ ರೋಮೆರಿಯೋ ಶೆಪರ್ಡ್(53*) ಕೇವಲ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಿಡಿಸುವ ಮೂಲಕ ಆಕರ್ಷಕ ಅರ್ಧ ಶತಕದಿಂದ ತಂಡದ ಮೊತ್ತವನ್ನು 200 ರ ಗಡಿಯನ್ನು ತಲುಪಲು ಸಹಕರಿಸಿದರು.

ಈ ಮೂಲಕ ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 213 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಸಿ ಎಸ್ ಕೆ ಪರ ಮತೀಶ ಪತಿರಾಣ 3 ವಿಕೆಟ್ ಪಡೆದರು.

214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಯುವ ಬ್ಯಾಟರ್ ಆಯುಷ್ ಮಾತ್ರೆ(94) ತಮ್ಮ ಅತ್ಯುತ್ತಮ ಬ್ಯಾಟಿಂಗ್ ಶೈಲಿಯಿಂದ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿ ಚೊಚ್ಚಲ ಅರ್ಧ ಶತಕ ಗಳಿಸಿದರು. ಇವರ ಜೊತೆಗೆ ಜಡೇಜಾ(77) ಕೂಡ ಉತ್ತಮ ಸಾಥ್ ನೀಡಿದರು. ಆದರೆ ಕೊನೆಯ 3 ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಸಿ ಬಿ ಬೌಲರ್ ಗಳು ಪಂದ್ಯವನ್ನು ತಮ್ಮೆಡೆಗೆ ಸೆಳೆದುಕೊಂಡರು. ಅರ್ ಸಿ ಬಿ ಪರ ಪಾದಾರ್ಪಣೆ ಪಂದ್ಯವನ್ನು ಆಡಿದ ಲುಂಗಿ ಎನ್ ಗಿಡಿ 3 ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ಸೈಕಲ್‌ಗೆ ಡಿಕ್ಕಿ ಹೊಡೆದು ನಿಯಂತ್ರಣ ತಪ್ಪಿದ ಬೈಕ್: ಮಹಿಳೆ ಸಾವು

ದೇವನಹಳ್ಳಿ: ರಸ್ತೆಯಲ್ಲಿ ತೆರಳುತ್ತಿದ್ದ ಸೈಕಲ್‌ಗೆ ದ್ವಿಚಕ್ರ ವಾಹನ ಡಿಕ್ಕಿ ಹೊಡೆದು, ಬಳಿಕ ಬೈಕ್ ಡಿವೈಡರ್‌ಗೆ ಅಪ್ಪಳಿಸಿದ ಪರಿಣಾಮ ಮಹಿಳೆಯೊಬ್ಬರು ಮೃತಪಟ್ಟಿರುವ…

6 hours ago

ಬೆಳೆಗಳಿಗೆ ಅಸಮರ್ಪಕ ರಸಗೊಬ್ಬರ ಬಳಕೆ: ಪರಿಸರದ ಮೇಲೆ ವ್ಯತಿರಿಕ್ತ ಪರಿಣಾಮ- ಮಣ್ಣು ವಿಜ್ಞಾನಿ ಡಾ. ಬಾಲಾಜಿ ನಾಯ್ಕ್

ಕೃಷಿ ವಿಜ್ಞಾನ ಕೇಂದ್ರದ ವತಿಯಿಂದ ದೊಡ್ಡಬಳ್ಳಾಪುರ ತಾಲ್ಲೂಕಿನ ಹಾದ್ರಿಪುರ ಗ್ರಾಮದಲ್ಲಿ ಸಮತೋಲಿತ ರಸಗೊಬ್ಬರಗಳ ಬಳಕೆ ಜಾಗೃತಿ ಅಭಿಯಾನ ಕಾರ್ಯಕ್ರಮವನ್ನು ಕೃಷಿ…

10 hours ago

ಬಾಲ್ಯ ವಿವಾಹ ತಡೆದ ಅಧಿಕಾರಿಗಳು: 16 ವರ್ಷದ ಬಾಲಕಿ ರಕ್ಷಣೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನಡೆಯುತ್ತಿದ್ದ ಬಾಲ್ಯ ವಿವಾಹವನ್ನು ಅಧಿಕಾರಿಗಳು ತಡೆದು 16 ವರ್ಷದ ಬಾಲಕಿಯನ್ನು ರಕ್ಷಿಸಿದ ಘಟನೆ ನಡೆದಿದೆ.…

12 hours ago

ರಾಜ್ಯದಲ್ಲಿ ಹೆಚ್ಚಿದ ಸನ್ ಸ್ಟ್ರೋಕ್‌ ಪ್ರಕರಣ : ಉರಿ ಬಿಸಿಲಿಗೆ ತತ್ತರಿಸಿದ ಜನಜೀವನ

ರಾಜ್ಯದಲ್ಲಿ ದಿನದಿಂದ ದಿನಕ್ಕೆ ಏರುತ್ತಿರುವ ಉಷ್ಣಾಂಶ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಮೇ ತಿಂಗಳ ಉರಿ ಬಿಸಿಲು ಜನರನ್ನು…

14 hours ago

ವಿಜಯ್, ಆಃಡವನ್ ಮತ್ತು ಪ್ರಮಾಣವಚನ ನಿಷ್ಠೆ…….

ದೇವರ ದೃಷ್ಟಿಯಲ್ಲಿ ಮನುಷ್ಯರೆಲ್ಲಾ ಸಮಾನರು ಎಂಬುದು ನಮಗೆ ಮುಖ್ಯವಲ್ಲ, ಮನುಷ್ಯರ ದೃಷ್ಟಿಯಲ್ಲಿ ನಾವೆಲ್ಲರೂ ಸಮಾನರು ಎಂಬುದು ನಮಗೆ ಬಹಳ ಮುಖ್ಯ...…

17 hours ago

ಸಿನಿಮಾ ಸ್ಟೈಲ್‌ನಲ್ಲಿ ಪೊಲೀಸರ ಚೇಸಿಂಗ್: ಎರಡೇ ಗಂಟೆಗಳಲ್ಲಿ ಕಳವು ಮಾಡಿದ್ದ ಕ್ಯಾಷ್‌ ಸಮೇತ ಕಳ್ಳರ ಬಂಧನ

ಚಿಕ್ಕಬಳ್ಳಾಪುರ-‌ ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…

1 day ago