Categories: IPL 2025

ರಣ ರೋಚಕ ಪಂದ್ಯದಲ್ಲಿ ಗೆದ್ದು ಬೀಗಿದ ಆರ್ ಸಿ ಬಿ

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ಯು ಎರಡು ರನ್ ಗಳಿಂದ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.

ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಸ್ಫೋಟಕ ಆರಂಭಿಕ ಫಿಲ್ ಸಾಲ್ಟ್ ರ ಅನುಪಸ್ಥಿತಿಯಲ್ಲಿ ಬಂದ ಜಾಕೋಬ್ ಬೇತಲ್(55) ತಮ್ಮ ಚೊಚ್ಚಲ ಐ ಪಿ ಎಲ್ ಅರ್ಧ ಶತಕ ಸಿಡಿಸಿದರು. ಹಾಗು ವಿರಾಟ್ ಕೋಹ್ಲಿ (62) ಕೂಡ 5 ಫೋರ್ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಈ ಆವೃತ್ತಿಯ 7 ನೇ ಅರ್ಧಶತಕ ಗಳಿಸಿ ಔಟಾದರು.
ಕೊನೆಯ ಎರಡು ಓವರ್ ಗಳಲ್ಲಿ ಅಬ್ಬರಿಸಿದ ವೆಸ್ಟ್ ಇಂಡೀಸ್ ನ ದೈತ್ಯ ರೋಮೆರಿಯೋ ಶೆಪರ್ಡ್(53*) ಕೇವಲ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಿಡಿಸುವ ಮೂಲಕ ಆಕರ್ಷಕ ಅರ್ಧ ಶತಕದಿಂದ ತಂಡದ ಮೊತ್ತವನ್ನು 200 ರ ಗಡಿಯನ್ನು ತಲುಪಲು ಸಹಕರಿಸಿದರು.

ಈ ಮೂಲಕ ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 213 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಸಿ ಎಸ್ ಕೆ ಪರ ಮತೀಶ ಪತಿರಾಣ 3 ವಿಕೆಟ್ ಪಡೆದರು.

214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಯುವ ಬ್ಯಾಟರ್ ಆಯುಷ್ ಮಾತ್ರೆ(94) ತಮ್ಮ ಅತ್ಯುತ್ತಮ ಬ್ಯಾಟಿಂಗ್ ಶೈಲಿಯಿಂದ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿ ಚೊಚ್ಚಲ ಅರ್ಧ ಶತಕ ಗಳಿಸಿದರು. ಇವರ ಜೊತೆಗೆ ಜಡೇಜಾ(77) ಕೂಡ ಉತ್ತಮ ಸಾಥ್ ನೀಡಿದರು. ಆದರೆ ಕೊನೆಯ 3 ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಸಿ ಬಿ ಬೌಲರ್ ಗಳು ಪಂದ್ಯವನ್ನು ತಮ್ಮೆಡೆಗೆ ಸೆಳೆದುಕೊಂಡರು. ಅರ್ ಸಿ ಬಿ ಪರ ಪಾದಾರ್ಪಣೆ ಪಂದ್ಯವನ್ನು ಆಡಿದ ಲುಂಗಿ ಎನ್ ಗಿಡಿ 3 ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Share
Published by
Ramesh Babu

Recent Posts

ನೀರಾವರಿ ಯೋಜನೆಗಳ ಕಾಮಗಾರಿ ವಿಳಂಬ ಸಹಿಸುವುದಿಲ್ಲ- ಸಚಿವ ಎನ್ ಚಲುವರಾಯಸ್ವಾಮಿ

ರಾಜ್ಯದ ನೀರಾವರಿ ಯೋಜನೆಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಿ ರೈತರಿಗೆ ಯೋಜನೆಗಳ ಸಂಪೂರ್ಣ ಪ್ರಯೋಜನ ತಲುಪಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಹೆಚ್ಚಿನ ಬದ್ಧತೆಯಿಂದ…

1 hour ago

ಇಂದು (ಸೆ.8) ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರ ವ್ಯಾಪ್ತಿಯಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 8ರಂದು ನಗರದ ಹಲವು ಪ್ರದೇಶಗಳಲ್ಲಿ ಬೆಳಿಗ್ಗೆ 10ರಿಂದ ಸಂಜೆ…

2 hours ago

ಶ್ರಾವಣ ಮಾಸದ ಕೊನೆಯ ಸೋಮವಾರ: ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಹೂವಿನ ಆರತಿ ಸೇವೆ

ದೊಡ್ಡಬಳ್ಳಾಪುರ: ತಾಲ್ಲೂಕಿನ ಎಸ್.ಎಂ.ಗೊಲ್ಲಹಳ್ಳಿ ಗ್ರಾಮದ ದಿನ್ನೆ ಬಯಲು ಬಸವಣ್ಣ ದೇವಾಲಯದಲ್ಲಿ ಶ್ರಾವಣ ಮಾಸದ ಕೊನೆಯ ಸೋಮವಾರದ ಅಂಗವಾಗಿ ವಿಶೇಷ ಪೂಜೆ…

14 hours ago

ಅಗ್ನಿ ಅವಘಡದ ವೇಳೆ ತುರ್ತು ಕ್ರಮಗಳ ಕುರಿತು ಅಣಕು ಪ್ರದರ್ಶನ: ಯುವ ಆಪ್ತಮಿತ್ರ ತರಬೇತಿ ಶಿಬಿರದಲ್ಲಿ ರೋವರ್ಸ್–ರೇಂಜರ್ಸ್‌ಗೆ ಜಾಗೃತಿ

ದೊಡ್ಡಬಳ್ಳಾಪುರ: ರಾಷ್ಟ್ರೀಯ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರಗಳ ವತಿಯಿಂದ ಹಮ್ಮಿಕೊಂಡಿರುವ ‘ಯುವ ಆಪ್ತಮಿತ್ರ’ ತರಬೇತಿ ಶಿಬಿರದ ಅಂಗವಾಗಿ ನಗರದ…

17 hours ago

ಘಾಟಿ ಸುಬ್ರಹ್ಮಣ್ಯ ತೇರಿನ ಬೀದಿಯಲ್ಲಿದ್ದ ಪೂಜಾ ಸಾಮಗ್ರಿ ಅಂಗಡಿಗಳ ತೆರವು

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದಲ್ಲಿರುವ ತೇರಿನ ಬೀದಿಯ ಇಕ್ಕೆಲಗಳಲ್ಲಿ ಇಟ್ಟುಕೊಂಡಿದ್ದ ಪೂಜಾ ಸಾಮಗ್ರಿ ಅಂಗಡಿಗಳನ್ನು…

22 hours ago

ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು; ಪುಟಾಣಿ ಮಕ್ಕಳ ಪರದಾಟ: ನಗರಸಭೆ ನಿರ್ಲಕ್ಷ್ಯಕ್ಕೆ ಸಾರ್ವಜನಿಕರ ಆಕ್ರೋಶ: ರೋಗ ಹರಡುವ ಭೀತಿ

ದೊಡ್ಡಬಳ್ಳಾಪುರ: ನಗರದ ಕನಕದಾಸ ರಸ್ತೆ, ದೇವರಾಜನಗರದಲ್ಲಿರುವ ಅಂಗನವಾಡಿ ಕೇಂದ್ರದ ಬಳಿ ಚರಂಡಿ ನೀರು ರಸ್ತೆ ಮೇಲೆ ಹರಿಯುತ್ತಿದ್ದು, ಪುಟಾಣಿ ಮಕ್ಕಳು…

23 hours ago