ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಸಿ ಎಸ್ ಕೆ ವಿರುದ್ಧದ ಪಂದ್ಯದಲ್ಲಿ ಆರ್ ಸಿ ಬಿ ಯು ಎರಡು ರನ್ ಗಳಿಂದ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನವನ್ನು ಅಲಂಕರಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಆರಂಭಿಸಿದ ಆರ್ ಸಿ ಬಿ ತಂಡ ಉತ್ತಮ ಆರಂಭ ಪಡೆಯುವಲ್ಲಿ ಯಶಸ್ವಿಯಾಯಿತು. ಸ್ಫೋಟಕ ಆರಂಭಿಕ ಫಿಲ್ ಸಾಲ್ಟ್ ರ ಅನುಪಸ್ಥಿತಿಯಲ್ಲಿ ಬಂದ ಜಾಕೋಬ್ ಬೇತಲ್(55) ತಮ್ಮ ಚೊಚ್ಚಲ ಐ ಪಿ ಎಲ್ ಅರ್ಧ ಶತಕ ಸಿಡಿಸಿದರು. ಹಾಗು ವಿರಾಟ್ ಕೋಹ್ಲಿ (62) ಕೂಡ 5 ಫೋರ್ ಹಾಗೂ 5 ಸಿಕ್ಸರ್ ಗಳನ್ನು ಸಿಡಿಸುವ ಮೂಲಕ ಈ ಆವೃತ್ತಿಯ 7 ನೇ ಅರ್ಧಶತಕ ಗಳಿಸಿ ಔಟಾದರು.
ಕೊನೆಯ ಎರಡು ಓವರ್ ಗಳಲ್ಲಿ ಅಬ್ಬರಿಸಿದ ವೆಸ್ಟ್ ಇಂಡೀಸ್ ನ ದೈತ್ಯ ರೋಮೆರಿಯೋ ಶೆಪರ್ಡ್(53*) ಕೇವಲ 14 ಎಸೆತಗಳಲ್ಲಿ 4 ಬೌಂಡರಿ 6 ಸಿಕ್ಸರ್ ಸಿಡಿಸುವ ಮೂಲಕ ಆಕರ್ಷಕ ಅರ್ಧ ಶತಕದಿಂದ ತಂಡದ ಮೊತ್ತವನ್ನು 200 ರ ಗಡಿಯನ್ನು ತಲುಪಲು ಸಹಕರಿಸಿದರು.
ಈ ಮೂಲಕ ಆರ್ ಸಿ ಬಿ 20 ಓವರ್ ಗಳ ಅಂತ್ಯಕ್ಕೆ 213 ರನ್ ಗಳ ಬೃಹತ್ ಮೊತ್ತವನ್ನು ಕಲೆ ಹಾಕಿತು. ಸಿ ಎಸ್ ಕೆ ಪರ ಮತೀಶ ಪತಿರಾಣ 3 ವಿಕೆಟ್ ಪಡೆದರು.
214 ರನ್ ಗಳ ಬೃಹತ್ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ತಂಡಕ್ಕೆ ಉತ್ತಮ ಆರಂಭ ಸಿಕ್ಕಿತು. ಯುವ ಬ್ಯಾಟರ್ ಆಯುಷ್ ಮಾತ್ರೆ(94) ತಮ್ಮ ಅತ್ಯುತ್ತಮ ಬ್ಯಾಟಿಂಗ್ ಶೈಲಿಯಿಂದ ಆರ್ ಸಿ ಬಿ ಬೌಲರ್ ಗಳ ಬೆವರಿಳಿಸಿ ಚೊಚ್ಚಲ ಅರ್ಧ ಶತಕ ಗಳಿಸಿದರು. ಇವರ ಜೊತೆಗೆ ಜಡೇಜಾ(77) ಕೂಡ ಉತ್ತಮ ಸಾಥ್ ನೀಡಿದರು. ಆದರೆ ಕೊನೆಯ 3 ಓವರ್ ಗಳಲ್ಲಿ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಸಿ ಬಿ ಬೌಲರ್ ಗಳು ಪಂದ್ಯವನ್ನು ತಮ್ಮೆಡೆಗೆ ಸೆಳೆದುಕೊಂಡರು. ಅರ್ ಸಿ ಬಿ ಪರ ಪಾದಾರ್ಪಣೆ ಪಂದ್ಯವನ್ನು ಆಡಿದ ಲುಂಗಿ ಎನ್ ಗಿಡಿ 3 ವಿಕೆಟ್ ಪಡೆದು ಮಿಂಚಿದರು.
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…
ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…
ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…
ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…