ರಥ ಎಳೆಯುವ ಉತ್ಸಾಹದಲ್ಲಿ ಕೆಳಕ್ಕೆ ಬಿದ್ದ ಭಕ್ತರು: ರಥದ ಚಕ್ರದಡಿಗೆ ಸಿಲುಕಿದ 7 ಮಂದಿ ಭಕ್ತರು: ಡಿವೈಎಸ್ಪಿ, ಪತ್ರಕರ್ತನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ರಥೋತ್ಸವದ ಸಂದರ್ಭದಲ್ಲಿ ರಥ ಎಳೆಯುವಾಗ ನೂಕುನುಗ್ಗಲಿ‌ನಲ್ಲಿ ಆಯತಪ್ಪಿ ಚಕ್ರದಡಿಗೆ ಸಿಲುಕಿದ್ದ ಏಳು ಮಂದಿ ಭಕ್ತರನ್ನು ದೊಡ್ಡಬಳ್ಳಾಪುರ ಉಪವಿಭಾಗದ ಡಿವೈಎಸ್ಪಿ ಪಿ.ರವಿ ಹಾಗೂ ಪತ್ರಕರ್ತ ಶಿವರಾಜ್ ನೇಸರ ಅವರು ಪ್ರಾಣಾಪಾಯದಿಂದ ಪಾರು ಮಾಡಿ ಸಮಯಪ್ರಜ್ಞೆ ಮೆರೆದಿದ್ದಾರೆ.

ರಥ ಎಳೆಯುವ ಉತ್ಸಾಹದಲ್ಲಿ ಭಕ್ತರು ಕೆಳಕ್ಕೆ ಬಿದ್ದರು. ಅಲ್ಲಿಯೇ ಜನರನ್ನು ನಿಯಂತ್ರಿಸುತ್ತಿದ್ದ ಡಿವೈಎಸ್ಪಿ ರವಿ ಅವರು ರಥ ನಿಲ್ಲಿಸುವಂತೆ ಕೂಗಿಕೊಂಡರು. ಆದರೆ, ಯಾರೂ ಕಿವಿಗೊಡಲಿಲ್ಲ. ಆಗ ಪತ್ರಕರ್ತ ಶಿವರಾಜ ನೇಸರ ಅವರು ಮಹಿಳೆ ಸೇರಿದಂತೆ 7 ಜನರನ್ನು ಚಕ್ರ ಸಾಗುವ ಹಾದಿಯಿಂದ ಹೊರದೂಡಿ ಅಪಾಯದಿಂದ ಪಾರು ಮಾಡಿ ಮಾನವೀಯತೆ ಮೆರೆದಿದ್ದಾರೆ. ಆ ಬಳಿಕ ಚಕ್ರ ಮುಂದಕ್ಕೆ ಸಾಗಿತು. ಒಟ್ಟಾರೆ ಅಧಿಕಾರಿ ಹಾಗೂ ಪತ್ರಕರ್ತರ ಸಮಯಪ್ರಜ್ಞೆಯಿಂದ ಕೂದಲೆಳೆ ಅಂತರದಲ್ಲಿ ಅವಘಡವೊಂದು ತಪ್ಪಿದೆ.

Ramesh Babu

Journalist

Recent Posts

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

7 hours ago

ಪ್ರತ್ಯೇಕ ಅಪಘಾತ ಕೇಸ್ : ಮೂವರು ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

8 hours ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

9 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

10 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

19 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

1 day ago