ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.
ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಪ್ರಗತಿ…
ದೊಡ್ಡಬಳ್ಳಾಪುರದಲ್ಲಿ ನಟ ಪ್ರಥಮ್ ಗೆ ಜೀವ ಬೆದರಿಕೆ ಹಾಗೂ ಹಲ್ಲೆ ಯತ್ನ ಪ್ರಕರಣಕ್ಕೆ ಸಂಬಂಧಸಿದಂತೆ, ಇಂದು ಆರೋಪಿಗಳಾದ ಯಶಸ್ವಿನಿ ಗೌಡ,…
ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಸಂಬಂಧಿಸಿದಂತೆ ಐತಿಹಾಸಿಕ, ಧಾರ್ಮಿಕ, ನೈಸರ್ಗಿಕ ಹಾಗೂ ಹೆಚ್ಚು ಪ್ರವಾಸಿಗರು ಭೇಟಿ ನೀಡುವ ಪ್ರಮುಖ ಒಟ್ಟು 25…
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು ಕೃಷ್ಣಾದಲ್ಲಿ ನಡೆದ ವಸತಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಮುಖ್ಯಾಂಶಗಳು; • ಪ್ರಧಾನಮಂತ್ರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಐತಿಹಾಸಿಕ ಹಿನ್ನೆಲೆಯುಳ್ಳ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಮಾರ್ಗದಲ್ಲಿ…
ವಿಭಜನೆಯ ಬೀಜಗಳು ಮೊಳಕೆ ಒಡೆಯದಂತೆ ತಡೆಯುವ ಜವಾಬ್ದಾರಿ ನಮ್ಮೆಲ್ಲರದು. ನಾವೆಲ್ಲ ಇದೊಂದು ರಾಜಕೀಯ ಷಡ್ಯಂತ್ರ, ಕುತಂತ್ರ ಎಂದು ಸುಮ್ಮನೆ ಮಾತನಾಡಿಕೊಳ್ಳುತ್ತಾ,…