ರಸಗೊಬ್ಬರಗಳಿಗೆ ಹೆಚ್ಚಿದ ಬೇಡಿಕೆ: ರೈತರ ಸುಲಿಗೆಗೆ ಇಳಿದ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಕಂಪನಿ?

ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.

ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಚೇತನ್ ರೈತರ ಒಂದು ಎಕರೆ ಬೆಳೆಗೆ ಒಂದು ಮೂಟೆ ರಸಗೊಬ್ಬರ ( ಯೂರಿಯಾ ) ಬೇಕು ಆದರೆ, ರೈತರ ಆಧಾರ್ ಕಾರ್ಡ್ ಕೊಟ್ಟರೆ ಒಂದು ಮೂಟೆ ಕೊಡ್ತಿದಾರೆ, ಅದರ ಜೊತೆ 20-20-20 ಎಸ್ಪಿಕೆ ಕೊಂಡರೆ ಎರಡು ಮೂಟೆ ರಸಗೊಬ್ಬರ ಕೊಡುತ್ತಿದ್ದಾರೆ. ನಮಗೆ ಎಸ್ಪಿಕೆ ಬೇಕಾಗಿಲ್ಲ, ಎಸ್ಪಿಕೆ ಮಾರಾಟ ಮಾಡಲು ಬಲವಂತದಿಂದ ನಮಗೆ ಎಸ್ಪಿಕೆ ಕೊಂಡುಕೊಳ್ಳಲು ಈ ರೀತಿಯ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.

ಸೋಮವಾರ ಬೆಳಿಗ್ಗೆ ಯೂರಿಯಾ ಖರೀದಿಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಕ್ರಿಯಾಜೆನ್ ಮಾರಾಟ ಮಳಿಗೆಗೆ ಧಾವಿಸಿದಾಗ ಕಂಪೆನಿಯ ಸಿಬ್ಬಂದಿ ಈ ರೀತಿ ಹೇಳುತ್ತಿರುವುದಾಗಿ ರೈತರು ಆರೋಪಿಸಿದ್ದಾರೆ.

Ramesh Babu

Journalist

Recent Posts

ಪ್ರಧಾನಿ ನರೇಂದ್ರ ಮೋದಿಯನ್ನ ಭೇಟಿಯಾದ ಸಿಎಂ ಸಿದ್ದರಾಮಯ್ಯ:ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ: ಬೇಡಿಕೆ ಯಾವುದು….?

ದೆಹಲಿಯಲ್ಲಿ ಇಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ರಾಜ್ಯಕ್ಕೆ ಸಂಬಂಧಿಸಿದಂತೆ ಬಹುದಿನಗಳಿಂದ ಬಾಕಿಯಿರುವ ಬೇಡಿಕೆಗಳನ್ನು ಈಡೇರಿಸುವಂತೆ ಮನವಿ ಪತ್ರವನ್ನು…

11 hours ago

ಕಡೇ ಕಾರ್ತೀಕ ಸೋಮವಾರ: ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ದೇವಾಲಯದಲ್ಲಿ ಲಕ್ಷ ದೀಪೋತ್ಸವ

ದೂಡ್ಡಬಳ್ಳಾಪುರದ ಮೀನಾಕ್ಷಿ ಸಮೇತ ಸ್ವಯಂ ಭುವನೇಶ್ವರ ಸ್ವಾಮಿಯವರ ದೇವಾಲಯದಲ್ಲಿ ಕಡೇ ಕಾರ್ತೀಕ ಸೋಮವಾರ ಪ್ರಯುಕ್ತ ಈ ದಿನ ಬೆಳಿಗ್ಗೆ ಗಣಪತಿ…

13 hours ago

ನಾಳೆ (ನ.18) ತಾಲೂಕಿನ ಹಲವು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳ ಪಟ್ಟಿ ಇಲ್ಲಿದೆ ನೋಡಿ….

ದೊಡ್ಡಬಳ್ಳಾಪುರ: ನಾಳೆ (ನ.18) ನಗರದ ಹೊರವಲಯದಲ್ಲಿರುವ 66/11ಕಿವಿ ಡಿ.ಕ್ರಾಸ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಕಾರ್ಯವನ್ನು ಹಮ್ಮಿಕೊಳ್ಳಲಾಗಿರುವುದರಿಂದ ತಾಲೂಕಿನ ಹಲವೆಡೆ ವಿದ್ಯುತ್‌…

13 hours ago

18 ದೇವಸ್ಥಾನಗಳಿಗೆ ಕನ್ನ ಹಾಕಿದ್ದ ಖದೀಮರ ಬಂಧನ: ಲಕ್ಷಾಂತರ ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು, ಗುಂಡುಗಳು ವಶ

  18 ದೇವಸ್ಥಾನಗಳಲ್ಲಿ ಕಳ್ಳತನ ಮಾಡಿದ್ದ ಮೂವರು ಆರೋಪಿಗಳನ್ನು‌ ಬಂಗಾರಪೇಟೆ ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ರೂ.1,50,000/-ಮೌಲ್ಯದ ಬಂಗಾರದ ತಾಳಿ ಬೊಟ್ಟುಗಳು,…

20 hours ago

ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯಕ್ಕೆ ಎಂಬಿಎ ವಿದ್ಯಾರ್ಥಿ ಸಾವು

ದೊಡ್ಡಬಳ್ಳಾಪುರ: ಮುಂದೆ ಸಾಗುತ್ತಿದ್ದ ಲಾರಿ ಚಾಲಕನ ನಿರ್ಲಕ್ಷ್ಯದಿಂದ ಹಿಂಬದಿಯಲ್ಲಿ ಬರುತ್ತಿದ್ದ ಕಾರು ಭೀಕರ ಅಪಘಾತಕ್ಕೆ ಒಳಗಾಗಿ ಎಂಬಿಎ ವಿದ್ಯಾರ್ಥಿ ಸಾವನಪ್ಪಿರುವ…

20 hours ago

ಮೊಬೈಲ್ ನೋಡುತ್ತಾ ಕುಳಿತಿದ್ದ 21 ವರ್ಷದ ಯುವಕನಿಗೆ ಚಾಕು ಇರಿತ: ಚಾಕು ಇರಿತ ವಿಡಿಯೋ ಸಿಸಿಟಿವಿಯಲ್ಲಿ ಸೆರೆ

ತನ್ನ ಪಾಡಿಗೆ ತಾನು ಮೊಬೈಲ್ ನೋಡುತ್ತಾ ಕುಳಿತಿದ್ದ ಯುವಕನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೇವನಹಳ್ಳಿ ತಾಲ್ಲೂಕಿನ…

23 hours ago