ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.
ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.
ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.
ಕರ್ತವ್ಯದ ವೇಳೆ ಮಡಿದ ಬೆಸ್ಕಾಂನ ಮೂವರು ಸಿಬ್ಬಂದಿಯ ಕುಟುಂಬಸ್ಥರಿಗೆ ಇಂಧನ ಸಚಿವ ಕೆ.ಜೆ ಜಾರ್ಜ್ ತಲಾ ಒಂದು ಕೋಟಿ ರೂ.…
ಬೆಂಗಳೂರಿನ ಕಸವನ್ನು ವಿಲೇವಾರಿ ಮಾಡಲು ಮಹದೇವಪುರ ಮತ್ತು ಮೀಟಗಾನಹಳ್ಳಿಯ ವಿಲೇವಾರಿ ಘಟಕಗಳ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದ ಹಿನ್ನೆಲೆ ಅಲ್ಲಿನ ಕಸದ…
ದೊಡ್ಡಬಳ್ಳಾಪುರ : ಭಾರತ ರಾಷ್ಟ್ರೀಯ ಟ್ರೇಡ್ ಯೂನಿಯನ್ (ಇಂಟಕ್ ) ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಯೂತ್ ವಿಭಾಗದ ಜಿಲ್ಲಾಧ್ಯಕ್ಷರಾಗಿ ಮೊಹಮ್ಮದ್…
ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಅಂಗವಿಕಲರ ವಿಶೇಷ ಉದ್ಯೋಗ ವಿನಿಮಯ ಕಚೇರಿ, ಪೀಣ್ಯ, ಬೆಂಗಳೂರು 'ಅಧ್ಯಯನ ವೃತ್ತ' (ಸ್ಟಡಿ…
ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…
ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…