ರಸಗೊಬ್ಬರಗಳಿಗೆ ಹೆಚ್ಚಿದ ಬೇಡಿಕೆ: ರೈತರ ಸುಲಿಗೆಗೆ ಇಳಿದ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಕಂಪನಿ?

ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.

ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಚೇತನ್ ರೈತರ ಒಂದು ಎಕರೆ ಬೆಳೆಗೆ ಒಂದು ಮೂಟೆ ರಸಗೊಬ್ಬರ ( ಯೂರಿಯಾ ) ಬೇಕು ಆದರೆ, ರೈತರ ಆಧಾರ್ ಕಾರ್ಡ್ ಕೊಟ್ಟರೆ ಒಂದು ಮೂಟೆ ಕೊಡ್ತಿದಾರೆ, ಅದರ ಜೊತೆ 20-20-20 ಎಸ್ಪಿಕೆ ಕೊಂಡರೆ ಎರಡು ಮೂಟೆ ರಸಗೊಬ್ಬರ ಕೊಡುತ್ತಿದ್ದಾರೆ. ನಮಗೆ ಎಸ್ಪಿಕೆ ಬೇಕಾಗಿಲ್ಲ, ಎಸ್ಪಿಕೆ ಮಾರಾಟ ಮಾಡಲು ಬಲವಂತದಿಂದ ನಮಗೆ ಎಸ್ಪಿಕೆ ಕೊಂಡುಕೊಳ್ಳಲು ಈ ರೀತಿಯ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.

ಸೋಮವಾರ ಬೆಳಿಗ್ಗೆ ಯೂರಿಯಾ ಖರೀದಿಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಕ್ರಿಯಾಜೆನ್ ಮಾರಾಟ ಮಳಿಗೆಗೆ ಧಾವಿಸಿದಾಗ ಕಂಪೆನಿಯ ಸಿಬ್ಬಂದಿ ಈ ರೀತಿ ಹೇಳುತ್ತಿರುವುದಾಗಿ ರೈತರು ಆರೋಪಿಸಿದ್ದಾರೆ.

Ramesh Babu

Journalist

Recent Posts

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

16 hours ago

ಅತಿವೃಷ್ಟಿ–ಬರ ಎದುರಿಸಲು ಸಚಿವರಿಗೆ ಜಿಲ್ಲೆಗಳ ಉಸ್ತುವಾರಿ: ಯಾವ ಸಚಿವರಿಗೆ ಯಾವ ಜಿಲ್ಲೆ? ಸರ್ಕಾರದಿಂದ ಉಸ್ತುವಾರಿ ಪಟ್ಟಿ ಪ್ರಕಟ

ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿಭಾಯಿಸಲು ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಸಚಿವ ಸಂಪುಟದ ಸದಸ್ಯರಿಗೆ…

21 hours ago

ಲಯನ್ಸ್ ಕ್ಲಬ್ ಆಫ್ ಕೊನಘಟ್ಟ ಲೆಜೆಂಡ್ಸ್ ಅಧ್ಯಕ್ಷರಾಗಿ ಜಿ.ಲಕ್ಷ್ಮಿಪತಿ ಆಯ್ಕೆ

ದೊಡ್ಡಬಳ್ಳಾಪುರ: ಸಮಾಜ ಸೇವೆಯೇ ಲಯನ್ಸ್ ಕ್ಲಬ್‌ನ ಮೂಲ ಧ್ಯೇಯವಾಗಿದ್ದು, ನಿರಂತರವಾಗಿ ಸೇವಾ ಕಾರ್ಯಗಳನ್ನು ಮುಂದುವರಿಸಬೇಕು. ಲಯನ್ಸ್ ಕ್ಲಬ್ ಆಫ್ ಕೊನಘಟ್ಟ…

21 hours ago

ಹುಣಸೂರು ಎಸಿ ಕಾವ್ಯಾರಾಣಿ ಲೋಕಾಯುಕ್ತ ಬಲೆಗೆ; ₹5.50 ಲಕ್ಷ ಲಂಚ ಸ್ವೀಕರಿಸುವ ವೇಳೆ ಟ್ರ್ಯಾಪ್

ಮೈಸೂರು: ಹುಣಸೂರು ಉಪ ವಿಭಾಗಾಧಿಕಾರಿ (ಎಸಿ) ಕಾವ್ಯಾರಾಣಿ ಅವರು ಲಂಚ ಸ್ವೀಕರಿಸುವ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ…

1 day ago

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 days ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

2 days ago