ರಸಗೊಬ್ಬರಗಳಿಗೆ ಹೆಚ್ಚಿದ ಬೇಡಿಕೆ: ರೈತರ ಸುಲಿಗೆಗೆ ಇಳಿದ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಕಂಪನಿ?

ತಾಲೂಕಿನಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಬಾಡುತ್ತಿದ್ದ ಬೆಳೆಗಳು ನಳನಳಿಸುತ್ತಿವೆ. ರಾಗಿ, ಜೋಳದ ಬೆಳೆಗೆ ಬೇಕಾದ ರಸಗೊಬ್ಬರಗಳಿಗೆ ಬೇಡಿಕೆಯೂ ಹೆಚ್ಚಾದೆ. ಆದರೆ, ಇದನ್ನೇ ಬಂಡವಾಳ ಮಾಡಿಕೊಂಡ ಕೆಲ ರಸಗೊಬ್ಬರ ಅಂಗಡಿಗಳು, ಡೀಲರ್ ಶಿಪ್ ಪಡೆದ ಕಂಪನಿಗಳು ರೈತರ ಸುಲಿಗೆಗೆ ಇಳಿದಿವೆ ಎನ್ನಲಾಗಿದೆ.

ತಾಲೂಕಿನ ಕಾಡನೂರು ಗ್ರಾಮದಲ್ಲಿರುವ ಕ್ರಿಯಾಜೆನ್ ಕಂಪನಿಯ ಕಿಸಾನ್ ವರ್ಲ್ಡ್ ಔಟ್ ಲೆಟ್ ನಲ್ಲಿ 20-20-20 (ಎನ್ ಪಿಕೆ) ಖರೀದಿಸಿದರಷ್ಟೇ ಯೂರಿಯಾ ನೀಡುವುದಾಗಿ ಹೇಳಿ ರೈತರನ್ನು ವಂಚಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ರೈತ ಚೇತನ್ ರೈತರ ಒಂದು ಎಕರೆ ಬೆಳೆಗೆ ಒಂದು ಮೂಟೆ ರಸಗೊಬ್ಬರ ( ಯೂರಿಯಾ ) ಬೇಕು ಆದರೆ, ರೈತರ ಆಧಾರ್ ಕಾರ್ಡ್ ಕೊಟ್ಟರೆ ಒಂದು ಮೂಟೆ ಕೊಡ್ತಿದಾರೆ, ಅದರ ಜೊತೆ 20-20-20 ಎಸ್ಪಿಕೆ ಕೊಂಡರೆ ಎರಡು ಮೂಟೆ ರಸಗೊಬ್ಬರ ಕೊಡುತ್ತಿದ್ದಾರೆ. ನಮಗೆ ಎಸ್ಪಿಕೆ ಬೇಕಾಗಿಲ್ಲ, ಎಸ್ಪಿಕೆ ಮಾರಾಟ ಮಾಡಲು ಬಲವಂತದಿಂದ ನಮಗೆ ಎಸ್ಪಿಕೆ ಕೊಂಡುಕೊಳ್ಳಲು ಈ ರೀತಿಯ ದೌರ್ಜನ್ಯ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.

ಸರ್ಕಾರಿ ಗೋದಾಮುಗಳಲ್ಲಿ ಇಲ್ಲದ ಯೂರಿಯಾ ಇಲ್ಲಿ ಮಾತ್ರ ಹೇಗೆ ಸಿಗುತ್ತಿದೆ ಎಂದು ಪ್ರಶ್ನಿಸಿದ ಅವರು, ಯೂರಿಯಾ ಬೆಲೆ 295 ರೂಪಾಯಿ ಇದೆ. ಆದರೆ ಇಲ್ಲಿ ಒಂದು ಚೀಲ ಯೂರಿಯಾಗೆ 310 ರೂ.ಪಡೆಯಲಾಗುತ್ತಿದೆ. ಸಾಲದೆಂಬಂತೆ ಎನ್ ಪಿಕೆ(20-20-20) ಖರೀದಿಸಿದರೆ ಮಾತ್ರ ಯೂರಿಯಾ ನೀಡುತ್ತೇವೆ. ಇಲ್ಲವಾದರೆ ಯಾವುದನ್ನೂ ಕೊಡುವುದಿಲ್ಲ ಎಂದು ಹೇಳಿ ರೈತರನ್ನು ಹೆದರಿಸುತ್ತಿದ್ದಾರೆ, ಎಂದು ಮತ್ತೊಬ್ಬ ರೈತ ತಮ್ಮ ಅಳಲು ತೋಡಿಕೊಂಡರು.

ಸೋಮವಾರ ಬೆಳಿಗ್ಗೆ ಯೂರಿಯಾ ಖರೀದಿಗೆ ಸುಮಾರು 100ಕ್ಕೂ ಹೆಚ್ಚು ಮಂದಿ ಕ್ರಿಯಾಜೆನ್ ಮಾರಾಟ ಮಳಿಗೆಗೆ ಧಾವಿಸಿದಾಗ ಕಂಪೆನಿಯ ಸಿಬ್ಬಂದಿ ಈ ರೀತಿ ಹೇಳುತ್ತಿರುವುದಾಗಿ ರೈತರು ಆರೋಪಿಸಿದ್ದಾರೆ.

Ramesh Babu

Journalist

Recent Posts

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

2 hours ago

ರೈತರ ಜಮೀನು ಬಲವಂತವಾಗಿ ವಶಪಡಿಸಿಕೊಳ್ಳುವುದಿಲ್ಲ: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಯಾವುದೇ ರೈತರ ಜಮೀನನ್ನೂ ಬಲವಂತವಾಗಿ ಸ್ವಾಧೀನಪಡಿಸಿಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ.…

12 hours ago

ಶಾಲೆ, ಅಂಗನವಾಡಿ ಮುಂಭಾಗವೇ ಕಸದ ರಾಶಿ; ದುರ್ವಾಸನೆಯ ನಡುವೆ ಪಾಠ ಕೇಳುವ ಮಕ್ಕಳು ಪಾಲನಜೋಗಿಹಳ್ಳಿ ಪ್ರವೇಶ ದ್ವಾರದಲ್ಲೇ ತ್ಯಾಜ್ಯ ರಾಶಿ – ಸ್ವಚ್ಛತೆಗೆ ಗ್ರಾಮಸ್ಥರ ಆಗ್ರಹ

ದೊಡ್ಡಬಳ್ಳಾಪುರ: ತಾಲೂಕಿನ ಕೊಡಿಗೇಹಳ್ಳಿ ಗ್ರಾಮ ಪಂಚಾಯಿತಿಗೆ ಒಳಪಡುವ ಪಾಲನಜೋಗಿಹಳ್ಳಿಯಲ್ಲಿ ತ್ಯಾಜ್ಯ ವಿಲೇವಾರಿ ಸಮಸ್ಯೆ ದಿನದಿಂದ ದಿನಕ್ಕೆ ಗಂಭೀರವಾಗುತ್ತಿದ್ದು, ಗ್ರಾಮ ಪ್ರವೇಶ…

13 hours ago

ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ವಾಹನ ಡಿಕ್ಕಿ: ಚಾಲಕ ಸಾವು

ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ–44ರ ದೇವನಹಳ್ಳಿ ಬೈಪಾಸ್‌ನ ಕೆಂಪೇಗೌಡ ವೃತ್ತದ ಬಳಿ ಮುಂದೆ ಸಾಗುತ್ತಿದ್ದ ಕಂಟೈನರ್ ಲಾರಿಗೆ ಐಚರ್ ಸರಕು ಸಾಗಣೆ…

14 hours ago

ಸೆಲೆಬ್ರಿಟಿ…………….

ಸೆಲೆಬ್ರಿಟಿ................ ಇತ್ತೀಚಿನ ವರ್ಷಗಳ ಭಾರತೀಯ ಸಮಾಜವನ್ನು ಸೂಕ್ಷ್ಮವಾಗಿ ಗಮನಿಸಿದರೆ ಬದಲಾಗುತ್ತಿರುವ ಯುವಸಮೂಹದ ಗ್ರಹಿಕಾ ಸಾಮರ್ಥ್ಯದ ಬಗ್ಗೆ ಅನುಮಾನ ಮೂಡುತ್ತಿದೆ. ಏಕೆಂದರೆ,…

1 day ago

ಎಲ್-ನಿನೋ ಪರಿಣಾಮ, ಮಳೆಯ ಕೊರತೆ, ತಾಪಮಾನದ ಏರಿಕೆ, ಒಣ ಹವಾಮಾನ ಹೆಚ್ಚಳ ಸಾಧ್ಯತೆ: ತೋಟಗಾರಿಕಾ ಬೆಳೆಗಳ ರಕ್ಷಣೆಗೆ ಇರಲಿ ಆದ್ಯತೆ

ಎಲ್-ನಿನೋ ಪರಿಣಾಮದಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯ ಕೊರತೆ, ತಾಪಮಾನದ ಏರಿಕೆ ಹಾಗೂ ಒಣ ಹವಾಮಾನ ಹೆಚ್ಚಾಗುವ ಸಾಧ್ಯತೆ ಇರುವ…

1 day ago