2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.
ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಕೆ ಮಾಡುವಂತೆ, ರಸಗೊಬ್ಬರ ಮಾರಾಟ ಮಳಿಗೆಯ ಮುಂದೆ ದಾಸ್ತಾನು ಮತ್ತು ಗರಿಷ್ಠ ಮಾರಾಟ ದರ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಮತ್ತು ಯೂರಿಯಾ ರಸಗೊಬ್ಬರವನ್ನು POS Machineನಲ್ಲಿ ಕಡ್ಡಾಯವಾಗಿ ಮಾರಾಟ ಮಾಡಲು ಕ್ರಮ ವಹಿಸಬೇಕು.
ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡದಂತೆ, ಅಧಿಕೃತ ರಸಗೊಬ್ಬರ ಮಾರಾಟ ಪರವಾನಗೆ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.
ಯೂರಿಯಾವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ಮಾರಾಟಮಾಡಲು ಪ್ರತಿ ತಾಲ್ಲೂಕಿನಲ್ಲಿ ಚಿಲ್ಲರೆ ಮಾರಾಟಗಾರರಿಗೆ ತರಬೇತಿಗಳನ್ನು ಆಯೋಜಿಸಲು ಸಹಾಯಕ ಕೃಷಿ ನಿರ್ದೇಶಕರಿಗೆ ಡಿಸಿ ಸೂಚಿಸಿದರು.
ಪ್ರಸಕ್ತ ಮುಂಗಾರು ಹಂಗಾಮಿಗೆ 69291 ಹೆಕ್ಟೇರ್ ಆಹಾರಧಾನ್ಯ ಮತ್ತು 257 ಹೆಕ್ಟೇರ್ ಎಣ್ಣೆಕಾಳು ಸೇರಿ ಒಟ್ಟು 69548 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು. ಬಿತ್ತನೆಗೆ ಅನುಗುಣವಾಗಿ ಮಾಹೆವಾರು ಈ ಮುಂಗಾರು ಹಂಗಾಮಿಗೆ ಯೂರಿಯಾ-11418 ಮೆ.ಟನ್, ಡಿಎಪಿ-7567 ಮೆ.ಟನ್, ಎಂಒಪಿ-1354 ಮೆ.ಟನ್, ಎಸ್ಎಸ್ ಪಿ -1086 ಮೆ.ಟನ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳು 14744 ಮೆ.ಟನ್ ಸೇರಿದಂತೆ ಒಟ್ಟು-36169ಮೆ.ಟನ್ ಬೇಡಿಕೆಯಿದೆ.
ಪ್ರಸ್ತುತ ಮಾಹೆಯಲ್ಲಿ 1732ಮೆ.ಟನ್ ಡಿಎಪಿ, 1327ಮೆ.ಟನ್ ಯೂರಿಯಾ ಮತ್ತು 2303ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆಯಿದೆ. ಈ ಬೇಡಿಕೆ ಪೂರೈಸಲು ಪ್ರಸ್ತುತ 17482 ಮೆ.ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.
ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ವಿವಿಧ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಚಿಲ್ಲರೆ ಮತ್ತು ಸಗಟು ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…
ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…