ರಸಗೊಬ್ಬರ ಕೃತಕ ಅಭಾವ ಸೃಷ್ಟಿಸಿದರೆ ಕ್ರಮ: ಜಿಲ್ಲಾಧಿಕಾರಿ ಡಾ. ಕೆ.ಎನ್.ಅನುರಾಧಾ

2026 ನೇ ಸಾಲಿನ ಮುಂಗಾರು ಹಂಗಾಮಿಗೆ ರಸಗೊಬ್ಬರಗಳ ಪೂರೈಕೆ ಮತ್ತು ವಿತರಣೆಯಲ್ಲಿ ಯಾವುದೇ ವ್ಯತ್ಯಯವಾಗದಂತೆ ಕ್ರಮವಹಿಸಲು ರಸಗೊಬ್ಬರ ಉತ್ಪಾದಕ ಸಂಸ್ಥೆಗಳ ಪ್ರತಿನಿಧಿಗಳಿಗೆ ಹಾಗೂ ಮಾರಾಟಗಾರರಿಗೆ ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ ಸೂಚಿಸಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ 2026-27ನೇ ಸಾಲಿನ ಕೃಷಿ ಪರಿಕರ ತಯಾರಕರ ಮತ್ತು ಮಾರಾಟಗಾರರ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ರೈತರಿಗೆ ರಸಗೊಬ್ಬರ ಲಭ್ಯತೆಯ ಬಗ್ಗೆ ಅರಿವು ಮೂಡಿಸಲು ಮತ್ತು ರಸಗೊಬ್ಬರಗಳಿಗೆ ಪರ್ಯಾವಾಗಿ ಸಾವಯವ ಗೊಬ್ಬರಗಳನ್ನು ಹೆಚ್ಚು ಬಳಕೆ ಮಾಡುವಂತೆ, ರಸಗೊಬ್ಬರ ಮಾರಾಟ ಮಳಿಗೆಯ ಮುಂದೆ ದಾಸ್ತಾನು ಮತ್ತು ಗರಿಷ್ಠ ಮಾರಾಟ ದರ ವಿವರಗಳನ್ನು ಸಾರ್ವಜನಿಕರಿಗೆ ಎದ್ದು ಕಾಣುವಂತೆ ಮತ್ತು ಯೂರಿಯಾ ರಸಗೊಬ್ಬರವನ್ನು POS Machineನಲ್ಲಿ ಕಡ್ಡಾಯವಾಗಿ ಮಾರಾಟ ಮಾಡಲು ಕ್ರಮ ವಹಿಸಬೇಕು.

ಜಿಲ್ಲೆಗೆ ಸರಬರಾಜಾಗಿರುವ ರಸಗೊಬ್ಬರಗಳನ್ನು ಯಾವುದೇ ಕಾರಣಕ್ಕೂ ಬೇರೆ ಜಿಲ್ಲೆಗಳಿಗೆ ಮಾರಾಟ ಮಾಡದಂತೆ, ಅಧಿಕೃತ ರಸಗೊಬ್ಬರ ಮಾರಾಟ ಪರವಾನಗೆ ಇಲ್ಲದೆ ರಸಗೊಬ್ಬರ ದಾಸ್ತಾನು ಮತ್ತು ಮಾರಾಟ ಮಾಡದಂತೆ ಕಟ್ಟು ನಿಟ್ಟಿನ ಸೂಚನೆ ನೀಡಿದರು.

ಯೂರಿಯಾವನ್ನು ಕೆ-ಕಿಸಾನ್ ತಂತ್ರಾಂಶದ ಮೂಲಕ ಮಾರಾಟಮಾಡಲು ಪ್ರತಿ ತಾಲ್ಲೂಕಿನಲ್ಲಿ ಚಿಲ್ಲರೆ ಮಾರಾಟಗಾರರಿಗೆ ತರಬೇತಿಗಳನ್ನು ಆಯೋಜಿಸಲು ಸಹಾಯಕ ಕೃಷಿ ನಿರ್ದೇಶಕರಿಗೆ ಡಿಸಿ ಸೂಚಿಸಿದರು.

ಪ್ರಸಕ್ತ ಮುಂಗಾರು ಹಂಗಾಮಿಗೆ 69291 ಹೆಕ್ಟೇರ್ ಆಹಾರಧಾನ್ಯ ಮತ್ತು 257 ಹೆಕ್ಟೇರ್ ಎಣ್ಣೆಕಾಳು ಸೇರಿ ಒಟ್ಟು 69548 ಹೆಕ್ಟೇರ್ ಬಿತ್ತನೆ ಗುರಿ ಹೊಂದಲಾಗಿದ್ದು. ಬಿತ್ತನೆಗೆ ಅನುಗುಣವಾಗಿ ಮಾಹೆವಾರು ಈ ಮುಂಗಾರು ಹಂಗಾಮಿಗೆ ಯೂರಿಯಾ-11418 ಮೆ.ಟನ್, ಡಿಎಪಿ-7567 ಮೆ.ಟನ್, ಎಂಒಪಿ-1354 ಮೆ.ಟನ್, ಎಸ್ಎಸ್ ಪಿ -1086 ಮೆ.ಟನ್ ಮತ್ತು ಕಾಂಪ್ಲೆಕ್ಸ್ ರಸಗೊಬ್ಬರಗಳು 14744 ಮೆ.ಟನ್ ಸೇರಿದಂತೆ ಒಟ್ಟು-36169ಮೆ.ಟನ್ ಬೇಡಿಕೆಯಿದೆ.

ಪ್ರಸ್ತುತ ಮಾಹೆಯಲ್ಲಿ 1732ಮೆ.ಟನ್‌ ಡಿಎಪಿ, 1327ಮೆ.ಟನ್ ಯೂರಿಯಾ ಮತ್ತು 2303ಮೆ.ಟನ್ ಕಾಂಪ್ಲೆಕ್ಸ್ ರಸಗೊಬ್ಬರಗಳ ಬೇಡಿಕೆಯಿದೆ. ಈ ಬೇಡಿಕೆ ಪೂರೈಸಲು ಪ್ರಸ್ತುತ 17482 ಮೆ.ಟನ್ ವಿವಿಧ ರಸಗೊಬ್ಬರಗಳ ದಾಸ್ತಾನು ಇರುತ್ತದೆ ಎಂದು ಜಂಟಿ ಕೃಷಿ ನಿರ್ದೇಶಕರು ತಿಳಿಸಿದರು.

ಸಭೆಯಲ್ಲಿ ತೋಟಗಾರಿಕೆ, ರೇಷ್ಮೆ ಮತ್ತು ಪಶುಸಂಗೋಪನೆ ಇಲಾಖೆಯ ವಿವಿಧ ಅಧಿಕಾರಿಗಳು, ಎಲ್ಲಾ ತಾಲ್ಲೂಕಿನ ಸಹಾಯಕ ಕೃಷಿ ನಿರ್ದೇಶಕರು, ರಸಗೊಬ್ಬರ ತಯಾರಿಕಾ ಕಂಪನಿಗಳ ಪ್ರತಿನಿಧಿಗಳು ಹಾಗೂ ಜಿಲ್ಲೆಯ ಚಿಲ್ಲರೆ ಮತ್ತು ಸಗಟು ರಸಗೊಬ್ಬರ ಮಾರಾಟಗಾರರು ಭಾಗವಹಿಸಿದ್ದರು.

Ramesh Babu

Journalist

Recent Posts

ಪ್ರಜಾಪ್ರಭುತ್ವ ಪ್ರತಿಯೊಬ್ಬರ ಆಶಯಗಳಿಗೆ ಧ್ವನಿ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

  ಪ್ರಜಾಪ್ರಭುತ್ವ ಹಾಗೂ ಸಂವಿಧಾನ ಕೇವಲ ಪುಸ್ತಕದಲ್ಲಿ ಅಥವಾ ಓದುಗೆ ಸೀಮಿತವಾಗಬಾರದು, ಪ್ರತಿ ಕ್ಷಣ, ಪ್ರತಿ ದಿನ ನಮ್ಮ ಜೀವನದಲ್ಲಿ…

4 hours ago

ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ರೌಡಿ ಶೀಟರ್ ಅರೆಸ್ಟ್! ದೊಡ್ಡಬಳ್ಳಾಪುರದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ | 2 ಕೆ.ಜಿ. 64 ಗ್ರಾಂ ಗಾಂಜಾ ವಶ

ದೊಡ್ಡಬಳ್ಳಾಪುರ: ಸುಮಾರು ಮೂರು ವರ್ಷಗಳಿಂದ ಪೊಲೀಸರ ಕಣ್ತಪ್ಪಿಸಿ ತಲೆಮರೆಸಿಕೊಂಡಿದ್ದ ರೌಡಿ ಶೀಟರ್‌ವೊಬ್ಬ ಗಾಂಜಾ ಮಾರಾಟ ಮಾಡಲು ಬಂದಾಗ ಪೊಲೀಸರ ಬಲೆಗೆ…

7 hours ago

ಡಿವೈಡರ್ ದಾಟಿ ಆಲ್ಟೋ ಕಾರಿಗೆ ಡಿಕ್ಕಿ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ

ದೇವನಹಳ್ಳಿ: ಹೆದ್ದಾರಿಯಲ್ಲಿ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಓರ್ವ ಮೃತಪಟ್ಟಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು ಗ್ರಾಮಾಂತರ…

7 hours ago

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

10 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

12 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

24 hours ago