ಬೆಂಗಳೂರು ಗ್ರಾಮಾಂತರ ಜಿಲ್ಲೆಯ ರೈತರು ಯೂರಿಯಾ ರಸಗೊಬ್ಬರ ಖರೀದಿಸಲು ಇನ್ನು ಮುಂದೆ ಫಾರ್ಮರ್ ಐಡಿ (ಎಫ್ಐಡಿ) ಸಂಖ್ಯೆ ಹೊಂದಿರುವುದು ಕಡ್ಡಾಯ ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕಿ ಕಲಾವತಿ ರವರು ತಿಳಿಸಿದ್ದಾರೆ.
ದೇವನಹಳ್ಳಿಯ ಸಹಾಯಕ ಕೃಷಿ ನಿರ್ದೇಶಕರ ಕಛೇರಿಯ, ಸಭಾಂಗಣದಲ್ಲಿ ನಡೆದ ರಸಗೊಬ್ಬರ ತಯಾರಕರು, ಸರಬರಾಜುದಾರರು ಮತ್ತು ಮಾರಾಟಗಾರರ ಸಭೆಯಲ್ಲಿ ಮಾತನಾಡಿ
2026-27ನೇ ಸಾಲಿನ ಮುಂಗಾರು ಹಂಗಾಮಿನಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ರಸಗೊಬ್ಬರ ವಿತರಣೆಯಲ್ಲಿ ಪಾರದರ್ಶಕತೆ ತರಲು ಮತ್ತು ಕಾಳಸಂತೆಯಲ್ಲಿ ಗೊಬ್ಬರ ಮಾರಾಟ ತಡೆಗಟ್ಟಲು ಈ ಕ್ರಮ ಕೈಗೊಳ್ಳಲಾಗಿದೆ.
ಕೆ-ಕಿಸಾನ್ ತಂತ್ರಾಂಶದ ಬಳಕ ರೈತರು ತಮ್ಮ ಜಮೀನಿನ ವಿಸ್ತೀರ್ಣ ಮತ್ತು ಬೆಳೆದ ಬೆಳೆಗೆ ಅನುಗುಣವಾಗಿ ಅಗತ್ಯ ಇರುವಷ್ಟು ಪ್ರಮಾಣದ ರಸಗೊಬ್ಬರವನ್ನು ಮಾತ್ರ ಕೆ ಕಿಸಾನ್ ತಂತ್ರಾಂಶದ ಮೂಲಕ ವಿತರಿಸಲಾಗುವುದು ಎಂದರು.
ಹೊಸ ಎಫ್ಐಡಿ ನೋಂದಣಿ: ಈವರೆಗೆ ಫಾರ್ಮರ್ ಐಡಿ ಹೊಂದಿರದ ರೈತರು ಕೂಡಲೇ ತಮ್ಮ ಪಹಣಿ, ಬ್ಯಾಂಕ್ ಪಾಸ್ ಬುಕ್ ಮತ್ತು ಆಧಾರ್ ಕಾರ್ಡ್ ನೊಂದಿಗೆ ಹತ್ತಿರದ ರೈತ ಸಂಪರ್ಕ ಕೇಂದ್ರ, ತೋಟಗಾರಿಕಾ ಇಲಾಖೆ ಅಥವಾ ಸಾಮಾನ್ಯ ಸೇವಾ ಕೇಂದ್ರಗಳಿಗೆ ಬೇಟಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಈಗಾಗಲೆ ಎಫ್.ಐಡಿ ಹೊಂದಿರುವ ರೈತರು ತಮ್ಮ ಎಲ್ಲಾ ಸರ್ವೆನಂಬರ್ ಗಳನ್ನು ಅದಕ್ಕೆ ಮಾಡಿಸಿಕೊಳ್ಳಲು ಅವಕಾಶ ಕಲ್ಪಿಸಿದೆ.
ಮಾರಾಟಗಾರರಿಗೆ ಎಚ್ಚರಿಕೆ: ಅಧಿಕೃತ ರಸಗೊಬ್ಬರ ಮಾರಾಟಗಾರರು ಕಡ್ಡಾಯವಾಗಿ ಕೆ-ಕಿಸಾನ್ ತಂತ್ರಾಂಶದಲ್ಲಿ ರೈತರ ಎಫ್ಐಡಿ ನಮೂದಿಸಿ ಗೊಬ್ಬರ ಮಾರಾಟಮಾಡಬೇಕು ಇದಕ್ಕೆ ಸಂಬಂಧಿಸಿದಂತೆ ಇಲಾಖೆ ತರಬೇತಿ ಹಾಗೂ ಮಾಹಿತಿ ನೀಡಲಾಗಿದೆ ಚಿಲ್ಲರೆ ರಸಗೊಬ್ಬರ ಮಾರಾಟ ಗಾರರು ತಮ್ಮ ಎಲ್ಲ “ಓ” ಫಾರಂಗಳನ್ನು ನವೀಕರಣಗೊಳಿಸಿಕೊಳ್ಳಬೇಕು. ಒಂದು ವೇಳೆ ಮಾರಾಟಗಾರರು ‘ಓ’ ಫಾರಂಗಳ ನೋಂದಣಿ ಇಲ್ಲದೆ ಮಾರಾಟ ಮಾಡಿದರೆ, ನಿಯಮ ಮೀರಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಿದರೆ ಅಥವಾ ಕೃಷಿಯೇತರ ಉದ್ದೇಶಕ್ಕೆ ರಸಗೊಬ್ಬರ ನೀಡಿದರೆ ಅಂತಹ ಮಾರಾಟಗಾರರ ಪರವಾನಾಗಿಯನ್ನು ರದ್ದುಗೊಳಿಸಲಾಗುವುದು ಎಂದು ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…