ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಬಸವೇಶ್ವರ ನಗರದ ಬಿಜೆಪಿ‌ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.

ಮ್ಯಾನ್ ಹೋಲ್ ಸ್ವಚ್ಛ ಮಾಡಿಸುವಂತೆ ಸಾಕಷ್ಟು ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ವಾರ್ಡಿನ ನಗರಸಭೆ ಸದಸ್ಯರಿಗೆ ಈ ಕುರಿತು ತಿಳಿಸಿದ ಬಳಿಕ ಮ್ಯಾನ್ ಹೋಲ್ ದುರಸ್ತಿ ಮಾಡಿಸಲಾಯಿತು. ಆದರೆ, ಮಳೆ ಬಂದ ನಂತರ ಮತ್ತೆ ಉಕ್ಕಿ ಹರಿಯುತ್ತಿದೆ. ಕೊಳಚೆ ನೀರು ಮನೆಯ ಮುಂದೆ ಹರಿಯುತ್ತಿದ್ದಯ, ದುರ್ವಾಸನೆ ಇರಲಾಗುತ್ತಿಲ್ಲ. ಕಿಟಕಿ, ಬಾಗಿಲು‌ ಮುಚ್ಚಿಕೊಂಡರೂ ವಾಸನೆಗೆ ಇರಲಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಗಂಗಾಂಭಿಕೆ ಅಳಲು ತೋಡಿಕೊಂಡರು.

ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.

ಇನ್ನು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಬಳಿಯೂ ಇದೇ ಅವಾಂತರ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಹಲವು ದಿನಗಳಿಂದ ಮಲ‌ ಮಿಶ್ರಿತ ಕೊಳಚೆ ನೀರು ಉಕ್ಕುತ್ತಿದ್ದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನಿಂದ ಕ್ರೂರವಾಗಿ ಹಲ್ಲೆ: ಇಬ್ಬರು ಮಕ್ಕಳು ಸ್ಥಳದಲ್ಲೇ ಸಾವು: ಒಬ್ಬ ಬಾಲಕ ಜೀವನ್ಮರಣ ಹೋರಾಟ

ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…

5 hours ago

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

20 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

1 day ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

1 day ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

1 day ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

2 days ago