ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಬಸವೇಶ್ವರ ನಗರದ ಬಿಜೆಪಿ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.
ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.
ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…
ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್ನಲ್ಲಿದ್ದಾರೆ ಎನ್ನುವುದು…
ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…
ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಚುನಾವಣಾ ಆಯೋಗ…
ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…
ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…