ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಬಸವೇಶ್ವರ ನಗರದ ಬಿಜೆಪಿ‌ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.

ಮ್ಯಾನ್ ಹೋಲ್ ಸ್ವಚ್ಛ ಮಾಡಿಸುವಂತೆ ಸಾಕಷ್ಟು ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ವಾರ್ಡಿನ ನಗರಸಭೆ ಸದಸ್ಯರಿಗೆ ಈ ಕುರಿತು ತಿಳಿಸಿದ ಬಳಿಕ ಮ್ಯಾನ್ ಹೋಲ್ ದುರಸ್ತಿ ಮಾಡಿಸಲಾಯಿತು. ಆದರೆ, ಮಳೆ ಬಂದ ನಂತರ ಮತ್ತೆ ಉಕ್ಕಿ ಹರಿಯುತ್ತಿದೆ. ಕೊಳಚೆ ನೀರು ಮನೆಯ ಮುಂದೆ ಹರಿಯುತ್ತಿದ್ದಯ, ದುರ್ವಾಸನೆ ಇರಲಾಗುತ್ತಿಲ್ಲ. ಕಿಟಕಿ, ಬಾಗಿಲು‌ ಮುಚ್ಚಿಕೊಂಡರೂ ವಾಸನೆಗೆ ಇರಲಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಗಂಗಾಂಭಿಕೆ ಅಳಲು ತೋಡಿಕೊಂಡರು.

ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.

ಇನ್ನು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಬಳಿಯೂ ಇದೇ ಅವಾಂತರ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಹಲವು ದಿನಗಳಿಂದ ಮಲ‌ ಮಿಶ್ರಿತ ಕೊಳಚೆ ನೀರು ಉಕ್ಕುತ್ತಿದ್ದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಬಿಸವನಹಳ್ಳಿಯಲ್ಲಿ ಅದ್ವಿತಾ ಜನ್ಮದಿನ ಅರ್ಥಪೂರ್ಣ ಆಚರಣೆ

ಗಣೇಶ್ ಕುಮಾರ್ ಮತ್ತು ಪೂರ್ಣಿಮಾ ಅವರ ಪೋಷಕತ್ವದಲ್ಲಿ, ಕೇಶವ ಮತ್ತು ಸುಷ್ಮಾ ದಂಪತಿಯ ಪುತ್ರಿ ಅದ್ವಿತಾ ಅವರ ಜನ್ಮದಿನವನ್ನು ಬಿಸವನಹಳ್ಳಿ…

14 hours ago

ಕಾರಿಗೆ ಅಡ್ಡ ಬಂದ ನಾಯಿ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ

ದೊಡ್ಡಬಳ್ಳಾಪುರ: ಹಿಂದೂಪುರ–ಯಲಹಂಕ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರಿಗೆ ದಿಢೀರನೆ ನಾಯಿ ಅಡ್ಡ ಬಂದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ…

17 hours ago

ಅನುಭವ, ಹಿರಿತನಕ್ಕೆ ತಕ್ಕಂತೆ ಸಚಿವ ಸ್ಥಾನ ನೀಡಿ- ಮನು.ಆರ್.ವಿ ಒತ್ತಾಯ

ಕೆ.ಎಚ್ ಮುನಿಯಪ್ಪನವರು ಏಳು ಬಾರಿ ಲೋಕಸಭಾ ಸದಸ್ಯರಾಗಿ, ಎರಡು ಬಾರಿ ಕೇಂದ್ರ ಸಚಿವರಾಗಿ, ಅಪಾರ ಅನುಭವ ಹಾಗೂ ಅವರ ಹಿರಿತನಕ್ಕೆ…

1 day ago

ಜೂ..7ರಂದು ‘ವಾಸ್ತುವಿನ ನಡಿಗೆ ಗ್ರಾಮದ ಕಡೆಗೆ’ ಕಾರ್ಯಕ್ರಮ: ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ ಭಾಗಿ- ಪೂತಮಾನಸ ಜ್ಯೋತಿಷ್ಯಾಲಯ ವ್ಯವಸ್ಥಾಪಕ ಡಾ.ಗಿರೀಶ್ ಕೆ

ಸಾಮಾನ್ಯ ಜನರಿಗೆ ವಾಸ್ತು ಸೂತ್ರಗಳ ಅನ್ವಯ ಜ್ಞಾನವನ್ನು ನೀಡುವ ಸಲುವಾಗಿ ಶ್ರೀ ಪೂತಮಾನಸ ಜ್ಯೋತಿಷ್ಯಾಲಯ ವತಿಯಿಂದ ಸುಕನ್ಯ ಮತ್ತು ಎಸ್.ಕೃಷ್ಣಮೂರ್ತಿ…

1 day ago

ಜೂ. 20 ರಿಂದ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಅರಂಭ- ಜಿಲ್ಲಾಧಿಕಾರಿ ಡಾ. ಕೆ.ಎನ್ ಅನುರಾಧ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಜೂನ್ 20 ರಿಂದ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ಐಆರ್) ಯನ್ನು…

1 day ago

ಪರಿಸರ ಸಂರಕ್ಷಣೆ ಪ್ರತಿಯೊಬ್ಬ ನಾಗರಿಕನ ಕರ್ತವ್ಯ

  ದೊಡ್ಡಬಳ್ಳಾಪುರ: ಪರಿಸರವನ್ನು ಕಾಪಾಡುವುದು ಕೇವಲ ಸರ್ಕಾರದ ಜವಾಬ್ದಾರಿಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ. ನಾವು ಇಂದು ಮಾಡುವ ಸಣ್ಣ…

1 day ago