ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಬಸವೇಶ್ವರ ನಗರದ ಬಿಜೆಪಿ‌ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.

ಮ್ಯಾನ್ ಹೋಲ್ ಸ್ವಚ್ಛ ಮಾಡಿಸುವಂತೆ ಸಾಕಷ್ಟು ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ವಾರ್ಡಿನ ನಗರಸಭೆ ಸದಸ್ಯರಿಗೆ ಈ ಕುರಿತು ತಿಳಿಸಿದ ಬಳಿಕ ಮ್ಯಾನ್ ಹೋಲ್ ದುರಸ್ತಿ ಮಾಡಿಸಲಾಯಿತು. ಆದರೆ, ಮಳೆ ಬಂದ ನಂತರ ಮತ್ತೆ ಉಕ್ಕಿ ಹರಿಯುತ್ತಿದೆ. ಕೊಳಚೆ ನೀರು ಮನೆಯ ಮುಂದೆ ಹರಿಯುತ್ತಿದ್ದಯ, ದುರ್ವಾಸನೆ ಇರಲಾಗುತ್ತಿಲ್ಲ. ಕಿಟಕಿ, ಬಾಗಿಲು‌ ಮುಚ್ಚಿಕೊಂಡರೂ ವಾಸನೆಗೆ ಇರಲಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಗಂಗಾಂಭಿಕೆ ಅಳಲು ತೋಡಿಕೊಂಡರು.

ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.

ಇನ್ನು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಬಳಿಯೂ ಇದೇ ಅವಾಂತರ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಹಲವು ದಿನಗಳಿಂದ ಮಲ‌ ಮಿಶ್ರಿತ ಕೊಳಚೆ ನೀರು ಉಕ್ಕುತ್ತಿದ್ದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

” ಕ್ಷಮೆ” ಎಂಬ ಭಾವದ ಸುತ್ತ……

ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…

57 minutes ago

ವೃದ್ಧ ದಂಪತಿ ಆತ್ನಹತ್ಯೆಗೆ ಯತ್ನ: ಪತಿ ಶಿವಪ್ಪ ಸಾವು

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…

11 hours ago

ಗ್ರಾಹಕರ ಸೋಗಿನಲ್ಲಿ ಬಂದು ಜ್ಯುವೆಲ್ಲರಿ ಅಂಗಡಿಯಲ್ಲಿ ದರೋಡೆ ಯತ್ನ

ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…

12 hours ago

ಗ್ಯಾಸ್ ಸೋರಿಕೆಯಿಂದ ಬೆಂಕಿ ಅವಘಡ: ಇಬ್ಬರು ಯುವಕರಿಗೆ ಸುಟ್ಟ ಗಾಯ

ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…

21 hours ago

ಬರ ವೀಕ್ಷಣೆ ನಡೆಸಿದ ಸಚಿವ ಕೆ.ಎಚ್ ಮುನಿಯಪ್ಪ: ಬೆಳೆ ವಿಮೆ ಮಾಡಿಸಲು ರೈತರಲ್ಲಿ ಮನವಿ

ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

2 days ago

28ಕ್ಕೂ ಹೆಚ್ಚು ಜಿಲ್ಲೆಗಳು ಬರದ ಸಂಕಷ್ಟದಲ್ಲಿ; ರೈತರಿಗೆ ತಕ್ಷಣ ₹10 ಸಾವಿರ ಕೋಟಿ ಪರಿಹಾರ ಪ್ಯಾಕೇಜ್ ಘೋಷಿಸಿ: ಬಿ.ವೈ. ವಿಜಯೇಂದ್ರ ಆಗ್ರಹ

ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…

3 days ago