ರಸ್ತೆಗೆ ಹರಿದ ಮಲಮಿಶ್ರಿತ ಕೊಳಚೆ ನೀರು: ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ಬರುವ ದುರ್ವಾಸನೆಕ್ಕೆ‌ ಜನ ಹೈರಾಣು

ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.

ಬಸವೇಶ್ವರ ನಗರದ ಬಿಜೆಪಿ‌ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.

ಮ್ಯಾನ್ ಹೋಲ್ ಸ್ವಚ್ಛ ಮಾಡಿಸುವಂತೆ ಸಾಕಷ್ಟು ಮನವಿ ಮಾಡಿದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಂಡಿಲ್ಲ. ವಾರ್ಡಿನ ನಗರಸಭೆ ಸದಸ್ಯರಿಗೆ ಈ ಕುರಿತು ತಿಳಿಸಿದ ಬಳಿಕ ಮ್ಯಾನ್ ಹೋಲ್ ದುರಸ್ತಿ ಮಾಡಿಸಲಾಯಿತು. ಆದರೆ, ಮಳೆ ಬಂದ ನಂತರ ಮತ್ತೆ ಉಕ್ಕಿ ಹರಿಯುತ್ತಿದೆ. ಕೊಳಚೆ ನೀರು ಮನೆಯ ಮುಂದೆ ಹರಿಯುತ್ತಿದ್ದಯ, ದುರ್ವಾಸನೆ ಇರಲಾಗುತ್ತಿಲ್ಲ. ಕಿಟಕಿ, ಬಾಗಿಲು‌ ಮುಚ್ಚಿಕೊಂಡರೂ ವಾಸನೆಗೆ ಇರಲಾಗುತ್ತಿಲ್ಲ ಎಂದು ಸ್ಥಳೀಯ ನಿವಾಸಿ ಗಂಗಾಂಭಿಕೆ ಅಳಲು ತೋಡಿಕೊಂಡರು.

ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ‌. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.

ಇನ್ನು ಸರ್ಕಾರಿ ಮೆಟ್ರಿಕ್ ಪೂರ್ವ ಬಾಲಕಿಯರ ಹಾಸ್ಟೆಲ್ ಬಳಿಯೂ ಇದೇ ಅವಾಂತರ. ಈ ಬಗ್ಗೆ ನಗರಸಭೆ ಅಧಿಕಾರಿಗಳ ಗಮನಕ್ಕೆ ತಂದರೂ ಏನು ಕ್ರಮ ಕೈಗೊಂಡಿಲ್ಲ. ಕಳೆದ ಹಲವು ದಿನಗಳಿಂದ ಮಲ‌ ಮಿಶ್ರಿತ ಕೊಳಚೆ ನೀರು ಉಕ್ಕುತ್ತಿದ್ದರೂ ನಗರಸಭೆ ಅಧಿಕಾರಿಗಳು ತಲೆ ಕೆಡಿಸಿಕೊಳ್ಳುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.

Ramesh Babu

Journalist

Recent Posts

ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ : ಪಿಡಿಒ ಮುದ್ದಲಿಂಗಯ್ಯ

ಚಿಕ್ಕನಾಯಕನಹಳ್ಳಿ : ಗ್ರಾಮೀಣ ಪ್ರದೇಶದ ಕುಟುಂಬಗಳಿಗೆ ಉದ್ಯೋಗ ಭದ್ರತೆ ಒದಗಿಸುವಲ್ಲಿ ಹಾಗೂ ಆರ್ಥಿಕವಾಗಿ ಸಬಲಗೊಳಿಸುವಲ್ಲಿ 'ವಿಬಿ-ಜಿ ರಾಮ್ ಜಿ' ಯೋಜನೆಯು ಗ್ರಾಮಸ್ಥರಿಗೆ…

2 hours ago

ಬೆನಕನಹಳ್ಳ ಅಭಿವೃದ್ಧಿಗೆ ಮೂಲಸೌಕರ್ಯ ಅಗತ್ಯ: ನಿಸರ್ಗ ನಾರಾಯಣಸ್ವಾಮಿ

ದೊಡ್ಡಬಳ್ಳಾಪುರ: ಪುರಾತನ ದೇವಾಲಯಗಳು, ಧಾರ್ಮಿಕ ಮಹತ್ವ ಹಾಗೂ ಪ್ರಕೃತಿ ಸೌಂದರ್ಯದ ಸಂಗಮವಾಗಿರುವ ಬೆನಕನಹಳ್ಳವನ್ನು ಸಮರ್ಪಕ ಮೂಲಸೌಕರ್ಯಗಳೊಂದಿಗೆ ಅಭಿವೃದ್ಧಿಪಡಿಸಿದರೆ ಪ್ರಮುಖ ಧಾರ್ಮಿಕ…

2 hours ago

ಮೇಕೆ ವಿಚಾರಕ್ಕೆ ಗಲಾಟೆ; ವ್ಯಕ್ತಿಯ ಕೊಲೆ: ಮೂವರಿಗೆ ಶಿಕ್ಷೆ ಮುಖ್ಯ ಆರೋಪಿಗೆ ಜೀವಾವಧಿ ಶಿಕ್ಷೆ, ಇಬ್ಬರಿಗೆ ಜೈಲು ಶಿಕ್ಷೆ ಹಾಗೂ ದಂಡ

ದೊಡ್ಡಬಳ್ಳಾಪುರ: ಮೇಕೆ ಮಗುಗೆ ಗುದ್ದಿದ ವಿಚಾರವಾಗಿ ಉಂಟಾದ ಗಲಾಟೆ ಕೊಲೆಯಲ್ಲಿ ಅಂತ್ಯಗೊಂಡ ಪ್ರಕರಣದಲ್ಲಿ ಮೂವರು ಆರೋಪಿಗಳನ್ನು ಅಪರಾಧಿಗಳೆಂದು ತೀರ್ಪು ನೀಡಿರುವ…

3 hours ago

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

6 hours ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

16 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

1 day ago