ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಬಸವೇಶ್ವರ ನಗರದ ಬಿಜೆಪಿ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.
ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.
ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…
ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಸಚಿವರಾದ ಕೆ.ಹೆಚ್ ಮುನಿಯಪ್ಪ ಅವರು ಇಂದು ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ತುಮಕೂರು: ರಾಜ್ಯದ 28ಕ್ಕೂ ಹೆಚ್ಚು ಜಿಲ್ಲೆಗಳು ಸಮರ್ಪಕ ಮಳೆಯ ಕೊರತೆಯಿಂದ ತೀವ್ರ ಬರದ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರ ಹಿತದೃಷ್ಟಿಯಿಂದ ರಾಜ್ಯ…