ನಗರದ 2ನೇ ವಾರ್ಡ್ ಬಸವೇಶ್ವರ ನಗರದಲ್ಲಿ ಕಳೆದ ಮೂರು ದಿನಗಳಿಂದ ಎಲ್ಲೆಂದರಲ್ಲಿ ಮ್ಯಾನ್ ಹೋಲ್ ಗಳು ಬಾಯ್ತೆರೆದು, ಮಲಮಿಶ್ರಿತ ಕೊಳಚೆ ನೀರು ರಸ್ತೆ ಹಾಗೂ ಮನೆಯ ಮುಂದೆ ಹರಿಯುತ್ತಿರುವುದರಿಂದ ಇಲ್ಲಿನ ನಿವಾಸಿಗಳು ಪರದಾಡುವಂತಾಗಿದೆ.
ಬಸವೇಶ್ವರ ನಗರದ ಬಿಜೆಪಿ ಕಚೇರಿ ಸಮೀಪ, ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿಲಯದ ಎದುರು ಮ್ಯಾನ್ ಹೋಲ್ ನಲ್ಲಿ ಕೊಳಚೆ ನೀರು ಉಕ್ಕಿ ಹರಿಯುತ್ತಿದೆ. ಮಳೆ ನಿಂತರೂ ಮ್ಯಾನ್ ಹೋಲ್ ಗಳಲ್ಲಿ ಕೊಳಚೆ ನೀರು ನಿಲ್ಲುವುದಿಲ್ಲ. ಮನೆಗಳ ಮುಂದಿನ ರಸ್ತೆಗಳಲ್ಲೇ ಗಬ್ಬು ನಾರುವ ಮಲ ಮಿಶ್ರಿತ ತ್ಯಾಜ್ಯ ನೀರಿನಿಂದ ದುರ್ವಾಸನೆ ಜನರಲ್ಲಿ ಅಸಹ್ಯ ತರಿಸಿದೆ.
ಬಸವೇಶ್ವರ ನಗರದ ರಸ್ತೆಯ ಮ್ಯಾನ್ ಹೋಲ್ ನಿಂದ ಹರಿಯುವ ನೀರು ಸೋಮೇಶ್ವರ ಬಡಾವಣೆಯ ರಸ್ತೆಯವರೆಗೂ ಹರಿದು ಸಂಗ್ರಹವಾಗಿದೆ. ಈ ರಸ್ತೆಯಲ್ಲಿ ಸಂಚರಿಸಲು ಅಸಾಧ್ಯವಾಗುವ ಪರಿಸ್ಥಿತಿ ನಿರ್ಮಾಣವಾಗಿದೆ. ರಾತ್ರಿ ವೇಳೆ ಮನೆಗಳಿಗೆ ಬರಬೇಕಾದರೆ ಸರಿಯಾದ ರಸ್ತೆಯಿಲ್ಲ. ಕೊಳಚೆ ನೀರಿನಲ್ಲಿ ನಡೆದು ಬರುವುದು ಅಸಹನೀಯವಾಗಿದೆ ಎಂದು ದೂರಿದರು.
ಕೂಡಲೇ ಮ್ಯಾನ್ ಹೋಲ್ ಸಮಸ್ಯೆ ಬಗೆಹರಿಸುವಂತೆ ಸ್ಥಳೀಯ ಜನಪ್ರತಿನಿಧಿಗಳು, ನಗರಸಭೆ ಅಧಿಕಾರಿಗಳನ್ನು ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…
ದೊಡ್ಡಬಳ್ಳಾಪುರ: ಕೇವಲ 200 ರೂಪಾಯಿ ಬಾಕಿ ಹಣ ಕೇಳಿದ್ದಕ್ಕೆ ಕಾಫಿ-ಟೀ ಅಂಗಡಿ ಮಾಲೀಕನ ಮೇಲೆ ದೊಣ್ಣೆಯಿಂದ ಹಲ್ಲೆ ನಡೆಸಿ ಕೊಲೆ…
ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ 2025–26ನೇ ಹಣಕಾಸು ವರ್ಷದಲ್ಲಿ ಪ್ರಯಾಣಿಕರ ಸಂಚಾರ ಮತ್ತು ಸರಕು ಸಾಗಣೆ ಎರಡೂ ವಿಭಾಗಗಳಲ್ಲಿ…
ರೌಡಿಯಿಸಂ, ಗೂಂಡಾಗಿರಿ, ದೌರ್ಜನ್ಯದಿಂದ ಏನೂ ಪ್ರಯೋಜನವಿಲ್ಲ. ನೆಮ್ಮದಿ ಕಳೆದುಕೊಂಡು, ಕುಟಂಬದಿಂದ ದೂರಾವಾಗಿ ಭಯಭೀತಿಯಲ್ಲಿ ಜೀವನ ಮಾಡಬೇಕಷ್ಟೇ. ಹೀಗಾಗಿ ಅಕ್ರಮ, ಅನೈತಿಕ,…