ನಾಪೋಕ್ಲು :ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು, ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಡಗಿನ ಬಹುತೇಕ ರಸ್ತೆಗಳಲ್ಲಿ ಗುಳಿ ಏರ್ಪಟ್ಟಿದ್ದು, ಅದರಲ್ಲೂ ದಕ್ಷಿಣ ಕೊಡಗಿನ ಭಾಗದ ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಸೋದ್ಯಮ ಜಿಲ್ಲೆಯಾದ ಕೊಡಗಿಗೆ ಹಲವಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು ಗುಳಿ ತಪ್ಪಿಸಲು ಹೋಗಿ ಹಲವರು ಅಪಘಾತಕೀಡಾಗಿದ್ದಾರೆ.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…