ನಾಪೋಕ್ಲು :ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಪ್ರಪಾತಕ್ಕೆ ಉರುಳಿ ಬಿದ್ದು ಪ್ರಯಾಣಿಕರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಘಟನೆ ಮಡಿಕೇರಿ ಬೆಟ್ಟಗೇರಿ ಮುಖ್ಯರಸ್ತೆಯ ತಳೂರು ಜಂಕ್ಷನ್ ಬಳಿ ಭಾನುವಾರ ನಡೆದಿದೆ.
ಭಾಗಮಂಡಲ ಕಡೆಯಿಂದ ಮಡಿಕೇರಿ ಕಡೆಗೆ ಟಿ. ನರಸೀಪುರದ ನಿವಾಸಿ ನಾಗೇಂದ್ರ ಎಂಬುವವರು ಚಲಾಯಿಸುತಿದ್ದ ಕಾರು ರಸ್ತೆಯಲ್ಲಿದ್ದ ಗುಂಡಿ ತಪ್ಪಿಸುವ ಸಂದರ್ಭ ನಿಯಂತ್ರಣ ತಪ್ಪಿ ರಸ್ತೆ ಬದಿಯ ಪ್ರಪಾತಕ್ಕೆ ಉರುಳಿಬಿದ್ದು, ಅಪಘಾತ ಸಂಭವಿಸಿದೆ. ಅಪಘಾತದಿಂದ ಕಾರು ಜಖಂಗೊಂಡಿದ್ದು, ಕಾರಿನಲ್ಲಿದ್ದ ನಾಗೇಂದ್ರ ಹಾಗೂ ಅವರ ಪತ್ನಿ ಮಗುವಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಕೊಡಗಿನ ಬಹುತೇಕ ರಸ್ತೆಗಳಲ್ಲಿ ಗುಳಿ ಏರ್ಪಟ್ಟಿದ್ದು, ಅದರಲ್ಲೂ ದಕ್ಷಿಣ ಕೊಡಗಿನ ಭಾಗದ ರಾಜ್ಯ ಹೆದ್ದಾರಿ ಸೇರಿದಂತೆ ಪ್ರಮುಖ ರಸ್ತೆಗಳಲ್ಲಿ ಸಂಚರಿಸಲು ಅಸಾಧ್ಯವಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರವಾಸೋದ್ಯಮ ಜಿಲ್ಲೆಯಾದ ಕೊಡಗಿಗೆ ಹಲವಷ್ಟು ಪ್ರವಾಸಿಗರು ಭೇಟಿ ನೀಡುತ್ತಿದ್ದು ಗುಳಿ ತಪ್ಪಿಸಲು ಹೋಗಿ ಹಲವರು ಅಪಘಾತಕೀಡಾಗಿದ್ದಾರೆ.
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…
ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…
ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…
ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…
ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…