ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯ ಪ್ರಾರಂಭಿಸಲಾಗಿತ್ತು. ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯಕ್ಕಾಗಿ ಮಣ್ಣು ಅಗೆಯಲಾಗಿತ್ತು. ಆ ಮಣ್ಣಿನ ರಾಶಿಯನ್ನು ತೆರವು ಮಾಡದೇ ರಸ್ತೆ ಇಕ್ಕೆಲಗಳಲ್ಲಿ ಹಾಗೇ ಬಿಟ್ಟಿದ್ದು, ಜೊತೆಗೆ ರಾಜಕಾಲುವೆಗೆ ತಡೆಗೋಡೆಯನ್ನು ಸಹ ನಿರ್ಮಾಣ ಮಾಡಿಲ್ಲ. ರಾಜಕಾಲುವೆ ತಕ್ಕಹಾಗೇ ಮೋರಿ ನಿರ್ಮಾಣ ಮಾಡಬೇಕಿತ್ತು ಅದೂ ಮಾಡಿಲ್ಲ. ಇದರಿಂದ ಪಾದಚಾರಿಗಳು, ವಾಹನ ಸವಾರರು ಜೀವ ಅಂಗೈಲಿಟ್ಟು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಈ ಕುರಿತು ವಿನಾಯಕನಗರದ ನಿವಾಸಿ ಕೊತ್ತೂರಪ್ಪ ಮಾತಾಡಿ, ಮ್ಯಾನ್ ಹೋಲ್ ಕಾರ್ಯಕ್ಕಾಗಿ ಅಗೆದ ಮಣ್ಣನ್ನು ತೆರವು ಮಾಡಿಲ್ಲ. ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡಿಲ್ಲ. ಮೋರಿ ಕಿರಿದಾಗಿದೆ. ಇಲ್ಲಿ ಏನಾದರೂ ಅನಾಹುತವಾದರೆ ನೇರ ಕಾರಣ ನಗರಸಭೆಯದ್ದಾಗಿರುತ್ತದೆ. ಇಲ್ಲಿ ಕೋರ್ಟ್ ಇರುವುದರಿಂದ ಸಾವಿರಾರು ಜನ ಈ ರಸ್ತೆಯಲ್ಲಿ ಓಡಾಡುತ್ತಾರೆ. ಈ ರಸ್ತೆ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯನ್ನು ಕಲ್ಪಿಸುತ್ತದೆ. ನಿತ್ಯ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿ ವಿನಾಯಕನಗರದ ನಿವಾಸಿಗಳು ಈ ರಸ್ತೆಯನ್ನು ಬಳಸುತ್ತಾರೆ.. ಕಳೆದ ಎರಡ್ಮೂರು ದಿನಗಳಿಂದ ಮಳೆ ಬರುತ್ತಿದೆ. ತೇವಾಂಶಕ್ಕೆ ವಾಹನಗಳು ಸ್ಕಿಡ್ ಅಗಿ ನಿಯಂತ್ರಣ ಕಳೆದುಕೊಂಡು ರಾಜಕಾಲುವೆಗೆ ಬೀಳುವ ಭಯದಲ್ಲಿ ಇಲ್ಲಿ ಸಂಚಾರ ಮಾಡಬೇಕಿದೆ. ಹಲವರು ಈಗಾಲೇ ಇಲ್ಲಿ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನವಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ನಗರಸಭೆ ಆಡಳಿತದ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. ನಗರಸಭೆಯ ಬೇಜವಾಬ್ದಾರಿತನಕ್ಕೆ ನಮ್ಮ ಧಿಕ್ಕಾರವಿರುತ್ತದೆ ಎಂದರು.
ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲೇ ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಇಲ್ಲಿರುವ ಮಣ್ಣಿನ ರಾಶಿಯನ್ನು ತೆರವು ಮಾಡಬೇಕು, ರಾಜಕಾಲುವೆಗೆ ತಡೆಗೋಡೆ, ಮೋರಿಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಶನಿವಾರ ವಿವಿಧ ದುರ್ಘಟನೆಗಳಲ್ಲಿ ಏಳು ಮಂದಿ ಮೃತಪಟ್ಟಿರುವ ಘಟನೆಗಳು ವರದಿಯಾಗಿವೆ. ದೇವನಹಳ್ಳಿ, ನೆಲಮಂಗಲ, ಹೊಸಕೋಟೆ ಭಾಗಗಳಲ್ಲಿ…
ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಇಂದು ಮಧ್ಯಾಹ್ನ ಸುಮಾರು 3:30ರ ಸಮಯದಲ್ಲಿ ದೊಡ್ಡಬಳ್ಳಾಪುರ ತಾಲೂಕಿನ…
ಹೊಸಕೋಟೆ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಹಲಸಳ್ಳಿ ಗೇಟ್ ಸಮೀಪದ ಹೊಸಕೋಟೆ–ಕೋಲಾರ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಮತ್ತು ದ್ವಿಚಕ್ರ…