ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯ ಪ್ರಾರಂಭಿಸಲಾಗಿತ್ತು. ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯಕ್ಕಾಗಿ ಮಣ್ಣು ಅಗೆಯಲಾಗಿತ್ತು.  ಆ ಮಣ್ಣಿನ ರಾಶಿಯನ್ನು ತೆರವು ಮಾಡದೇ ರಸ್ತೆ ಇಕ್ಕೆಲಗಳಲ್ಲಿ ಹಾಗೇ ಬಿಟ್ಟಿದ್ದು, ಜೊತೆಗೆ ರಾಜಕಾಲುವೆಗೆ ತಡೆಗೋಡೆಯನ್ನು ಸಹ ನಿರ್ಮಾಣ ಮಾಡಿಲ್ಲ. ರಾಜಕಾಲುವೆ ತಕ್ಕಹಾಗೇ ಮೋರಿ ನಿರ್ಮಾಣ ಮಾಡಬೇಕಿತ್ತು ಅದೂ ಮಾಡಿಲ್ಲ. ಇದರಿಂದ ಪಾದಚಾರಿಗಳು, ವಾಹನ ಸವಾರರು ಜೀವ ಅಂಗೈಲಿಟ್ಟು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ವಿನಾಯಕನಗರದ ನಿವಾಸಿ ಕೊತ್ತೂರಪ್ಪ ಮಾತಾಡಿ, ಮ್ಯಾನ್ ಹೋಲ್ ಕಾರ್ಯಕ್ಕಾಗಿ ಅಗೆದ ಮಣ್ಣನ್ನು ತೆರವು ಮಾಡಿಲ್ಲ. ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡಿಲ್ಲ. ಮೋರಿ ಕಿರಿದಾಗಿದೆ. ಇಲ್ಲಿ ಏನಾದರೂ ಅನಾಹುತವಾದರೆ ನೇರ ಕಾರಣ ನಗರಸಭೆಯದ್ದಾಗಿರುತ್ತದೆ. ಇಲ್ಲಿ ಕೋರ್ಟ್ ಇರುವುದರಿಂದ ಸಾವಿರಾರು ಜನ ಈ ರಸ್ತೆಯಲ್ಲಿ ಓಡಾಡುತ್ತಾರೆ. ಈ ರಸ್ತೆ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯನ್ನು ಕಲ್ಪಿಸುತ್ತದೆ. ನಿತ್ಯ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿ ವಿನಾಯಕನಗರದ ನಿವಾಸಿಗಳು ಈ ರಸ್ತೆಯನ್ನು ಬಳಸುತ್ತಾರೆ.. ಕಳೆದ ಎರಡ್ಮೂರು ದಿನಗಳಿಂದ ಮಳೆ ಬರುತ್ತಿದೆ. ತೇವಾಂಶಕ್ಕೆ ವಾಹನಗಳು ಸ್ಕಿಡ್ ಅಗಿ ನಿಯಂತ್ರಣ ಕಳೆದುಕೊಂಡು ರಾಜಕಾಲುವೆಗೆ ಬೀಳುವ ಭಯದಲ್ಲಿ ಇಲ್ಲಿ ಸಂಚಾರ ಮಾಡಬೇಕಿದೆ. ಹಲವರು ಈಗಾಲೇ ಇಲ್ಲಿ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನವಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ನಗರಸಭೆ ಆಡಳಿತದ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. ನಗರಸಭೆಯ ಬೇಜವಾಬ್ದಾರಿತನಕ್ಕೆ ನಮ್ಮ ಧಿಕ್ಕಾರವಿರುತ್ತದೆ ಎಂದರು.

ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲೇ ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಇಲ್ಲಿರುವ ಮಣ್ಣಿನ ರಾಶಿಯನ್ನು ತೆರವು ಮಾಡಬೇಕು, ರಾಜಕಾಲುವೆಗೆ ತಡೆಗೋಡೆ, ಮೋರಿಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು…

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

2 hours ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

7 hours ago

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

20 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

24 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

24 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

1 day ago