ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯ ಪ್ರಾರಂಭಿಸಲಾಗಿತ್ತು. ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯಕ್ಕಾಗಿ ಮಣ್ಣು ಅಗೆಯಲಾಗಿತ್ತು.  ಆ ಮಣ್ಣಿನ ರಾಶಿಯನ್ನು ತೆರವು ಮಾಡದೇ ರಸ್ತೆ ಇಕ್ಕೆಲಗಳಲ್ಲಿ ಹಾಗೇ ಬಿಟ್ಟಿದ್ದು, ಜೊತೆಗೆ ರಾಜಕಾಲುವೆಗೆ ತಡೆಗೋಡೆಯನ್ನು ಸಹ ನಿರ್ಮಾಣ ಮಾಡಿಲ್ಲ. ರಾಜಕಾಲುವೆ ತಕ್ಕಹಾಗೇ ಮೋರಿ ನಿರ್ಮಾಣ ಮಾಡಬೇಕಿತ್ತು ಅದೂ ಮಾಡಿಲ್ಲ. ಇದರಿಂದ ಪಾದಚಾರಿಗಳು, ವಾಹನ ಸವಾರರು ಜೀವ ಅಂಗೈಲಿಟ್ಟು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ವಿನಾಯಕನಗರದ ನಿವಾಸಿ ಕೊತ್ತೂರಪ್ಪ ಮಾತಾಡಿ, ಮ್ಯಾನ್ ಹೋಲ್ ಕಾರ್ಯಕ್ಕಾಗಿ ಅಗೆದ ಮಣ್ಣನ್ನು ತೆರವು ಮಾಡಿಲ್ಲ. ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡಿಲ್ಲ. ಮೋರಿ ಕಿರಿದಾಗಿದೆ. ಇಲ್ಲಿ ಏನಾದರೂ ಅನಾಹುತವಾದರೆ ನೇರ ಕಾರಣ ನಗರಸಭೆಯದ್ದಾಗಿರುತ್ತದೆ. ಇಲ್ಲಿ ಕೋರ್ಟ್ ಇರುವುದರಿಂದ ಸಾವಿರಾರು ಜನ ಈ ರಸ್ತೆಯಲ್ಲಿ ಓಡಾಡುತ್ತಾರೆ. ಈ ರಸ್ತೆ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯನ್ನು ಕಲ್ಪಿಸುತ್ತದೆ. ನಿತ್ಯ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿ ವಿನಾಯಕನಗರದ ನಿವಾಸಿಗಳು ಈ ರಸ್ತೆಯನ್ನು ಬಳಸುತ್ತಾರೆ.. ಕಳೆದ ಎರಡ್ಮೂರು ದಿನಗಳಿಂದ ಮಳೆ ಬರುತ್ತಿದೆ. ತೇವಾಂಶಕ್ಕೆ ವಾಹನಗಳು ಸ್ಕಿಡ್ ಅಗಿ ನಿಯಂತ್ರಣ ಕಳೆದುಕೊಂಡು ರಾಜಕಾಲುವೆಗೆ ಬೀಳುವ ಭಯದಲ್ಲಿ ಇಲ್ಲಿ ಸಂಚಾರ ಮಾಡಬೇಕಿದೆ. ಹಲವರು ಈಗಾಲೇ ಇಲ್ಲಿ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನವಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ನಗರಸಭೆ ಆಡಳಿತದ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. ನಗರಸಭೆಯ ಬೇಜವಾಬ್ದಾರಿತನಕ್ಕೆ ನಮ್ಮ ಧಿಕ್ಕಾರವಿರುತ್ತದೆ ಎಂದರು.

ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲೇ ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಇಲ್ಲಿರುವ ಮಣ್ಣಿನ ರಾಶಿಯನ್ನು ತೆರವು ಮಾಡಬೇಕು, ರಾಜಕಾಲುವೆಗೆ ತಡೆಗೋಡೆ, ಮೋರಿಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು…

Ramesh Babu

Journalist

Recent Posts

ಕಾನೂನು ತೊಡಕಿಲ್ಲದ ಅರ್ಜಿಗಳು ನಿಗದಿತ ಕಾಲಮಿತಿಯೊಳಗೆ ವಿಲೇವಾರಿ- ಸಚಿವ ಕೆ.ಎಚ್ ಮುನಿಯಪ್ಪ

ಪ್ರಜಾ ಸೇವಾ ಆಂದೋಲದ ಮೂಲಕ ಜನರಿಂದ ಸ್ವೀಕರಿಸುವ ಅರ್ಜಿಗಳಿಗೆ ಕಾನೂನು ವ್ಯಾಪ್ತಿ ಹೊರತುಪಡಿಸಿ ಉಳಿದ ಅರ್ಜಿಗಳಿಗೆ ನಿಗದಿತ ಕಾಲಮಿತಿಯೊಳಗೆ ಪರಿಹಾರ…

14 minutes ago

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

11 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

21 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

23 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

23 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

1 day ago