ರಸ್ತೆಯಲ್ಲಿ ಮ್ಯಾನ್ ಹೋಲ್ ಗೆ ಅಗೆದ ಮಣ್ಣಿನ ರಾಶಿ: ರಾಜಕಾಲುವೆಗೆ ಇಲ್ಲ ತಡೆಗೋಡೆ, ಕಿರಿದಾದ ಮೋರಿ: ವಾಹನ ಸವಾರರ ಪರದಾಟ: ಜೀವ ಭಯದಲ್ಲಿ ಜನ

ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯ ಪ್ರಾರಂಭಿಸಲಾಗಿತ್ತು. ಒಳಚರಂಡಿಯ ಹೊಸ ಮ್ಯಾನ್ ಹೋಲ್ ಕಾರ್ಯಕ್ಕಾಗಿ ಮಣ್ಣು ಅಗೆಯಲಾಗಿತ್ತು.  ಆ ಮಣ್ಣಿನ ರಾಶಿಯನ್ನು ತೆರವು ಮಾಡದೇ ರಸ್ತೆ ಇಕ್ಕೆಲಗಳಲ್ಲಿ ಹಾಗೇ ಬಿಟ್ಟಿದ್ದು, ಜೊತೆಗೆ ರಾಜಕಾಲುವೆಗೆ ತಡೆಗೋಡೆಯನ್ನು ಸಹ ನಿರ್ಮಾಣ ಮಾಡಿಲ್ಲ. ರಾಜಕಾಲುವೆ ತಕ್ಕಹಾಗೇ ಮೋರಿ ನಿರ್ಮಾಣ ಮಾಡಬೇಕಿತ್ತು ಅದೂ ಮಾಡಿಲ್ಲ. ಇದರಿಂದ ಪಾದಚಾರಿಗಳು, ವಾಹನ ಸವಾರರು ಜೀವ ಅಂಗೈಲಿಟ್ಟು ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ವಿನಾಯಕನಗರದ ನಿವಾಸಿ ಕೊತ್ತೂರಪ್ಪ ಮಾತಾಡಿ, ಮ್ಯಾನ್ ಹೋಲ್ ಕಾರ್ಯಕ್ಕಾಗಿ ಅಗೆದ ಮಣ್ಣನ್ನು ತೆರವು ಮಾಡಿಲ್ಲ. ರಾಜಕಾಲುವೆಗೆ ತಡೆಗೋಡೆ ನಿರ್ಮಾಣ ಮಾಡಿಲ್ಲ. ಮೋರಿ ಕಿರಿದಾಗಿದೆ. ಇಲ್ಲಿ ಏನಾದರೂ ಅನಾಹುತವಾದರೆ ನೇರ ಕಾರಣ ನಗರಸಭೆಯದ್ದಾಗಿರುತ್ತದೆ. ಇಲ್ಲಿ ಕೋರ್ಟ್ ಇರುವುದರಿಂದ ಸಾವಿರಾರು ಜನ ಈ ರಸ್ತೆಯಲ್ಲಿ ಓಡಾಡುತ್ತಾರೆ. ಈ ರಸ್ತೆ ಡಾ.ಬಿ.ಆರ್ ಅಂಬೇಡ್ಕರ್ ರಸ್ತೆಯನ್ನು ಕಲ್ಪಿಸುತ್ತದೆ. ನಿತ್ಯ ಶಾಲಾ ಮಕ್ಕಳು, ವೃದ್ಧರು, ಮಹಿಳೆಯರು ಸೇರಿ ವಿನಾಯಕನಗರದ ನಿವಾಸಿಗಳು ಈ ರಸ್ತೆಯನ್ನು ಬಳಸುತ್ತಾರೆ.. ಕಳೆದ ಎರಡ್ಮೂರು ದಿನಗಳಿಂದ ಮಳೆ ಬರುತ್ತಿದೆ. ತೇವಾಂಶಕ್ಕೆ ವಾಹನಗಳು ಸ್ಕಿಡ್ ಅಗಿ ನಿಯಂತ್ರಣ ಕಳೆದುಕೊಂಡು ರಾಜಕಾಲುವೆಗೆ ಬೀಳುವ ಭಯದಲ್ಲಿ ಇಲ್ಲಿ ಸಂಚಾರ ಮಾಡಬೇಕಿದೆ. ಹಲವರು ಈಗಾಲೇ ಇಲ್ಲಿ ಬಿದ್ದು ಗಾಯ ಮಾಡಿಕೊಂಡಿರುವ ನಿದರ್ಶನವಿದೆ. ಈ ಸಮಸ್ಯೆಯನ್ನು ಬಗೆಹರಿಸುವಂತೆ ಹಲವು ಬಾರಿ ನಗರಸಭೆ ಆಡಳಿತದ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ. ನಗರಸಭೆಯ ಬೇಜವಾಬ್ದಾರಿತನಕ್ಕೆ ನಮ್ಮ ಧಿಕ್ಕಾರವಿರುತ್ತದೆ ಎಂದರು.

ಭಾರೀ ಅನಾಹುತ ಸಂಭವಿಸುವುದಕ್ಕಿಂತ ಮೊದಲೇ ಕೂಡಲೇ ನಗರಸಭೆ ಎಚ್ಚೆತ್ತುಕೊಂಡು ಇಲ್ಲಿರುವ ಮಣ್ಣಿನ ರಾಶಿಯನ್ನು ತೆರವು ಮಾಡಬೇಕು, ರಾಜಕಾಲುವೆಗೆ ತಡೆಗೋಡೆ, ಮೋರಿಯನ್ನು ನಿರ್ಮಾಣ ಮಾಡಬೇಕು ಎಂದು ಒತ್ತಾಯಿಸಿದರು…

Ramesh Babu

Journalist

Recent Posts

ಪ್ರಸ್ತುತ ಒಂದು ಮಲೇರಿಯಾ, 6 ಡೆಂಗ್ಯೂ ದಾಖಲು: ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ:- ಡಿಸಿ ಡಾ.ಕೆ ಎನ್ ಅನುರಾಧ

ಮುಂಗಾರು ಹಂಗಾಮಿನಲ್ಲಿ ಮಳೆಯಿಂದಾಗಿ ಸೊಳ್ಳೆಗಳ ಉತ್ಪತ್ತಿ ಹೆಚ್ಚಾಗಲಿದ್ದು ಇದರಿಂದ ಸಾಂಕ್ರಾಮಿಕ ರೋಗಗಳು ಹರಡುವ ಸಾಧ್ಯತೆ ಇರುವುದರಿಂದ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ…

4 hours ago

ಗ್ರಾಮಾಂತರ ಪೊಲೀಸ್ ಠಾಣೆಗೆ ಬೊಲೆರೋ ವಾಹನ ಹಸ್ತಾಂತರ

ನಗರಕ್ಕೆ ಸಂಚಾರಿ ಪೊಲೀಸ್ ಠಾಣೆ ಮಂಜೂರಾಗಿದೆ. ಆದರೆ, ಇಲ್ಲಿಯವರೆಗೂ ಅನುದಾನ ಬಿಡುಗಡೆ ಮಾಡಿಲ್ಲ. ಪೊಲೀಸ್ ಠಾಣೆಯ ಜೀಪ್ ಗೂ ಶಾಸಕರ…

4 hours ago

ಲಕ್ಕೇನಹಳ್ಳಿಯಲ್ಲಿ ಎತ್ತಿನಹೊಳೆ ಡ್ಯಾಂ ನಿರ್ಮಾಣ ಬೇಡ- ತಹಶೀಲ್ದಾರ್ ಮಲ್ಲಪ್ಪಗೆ ರೈತರ ಮನವಿ

ಎತ್ತಿನಹೊಳೆ ಯೋಜನೆಯ ನೀರು ಸಂಗ್ರಹಣೆಗೆ ತಾಲೂಕಿನ ಸಾಸಲು ಹೋಬಳಿಯ ಲಕ್ಕೇನಹಳ್ಳಿಯಲ್ಲಿ ಜಲಾಶಯ ನಿರ್ಮಾಣ ಮಾಡಲು ಸರ್ಕಾರ ನಿರ್ಧರಿಸಿದೆ. ಇದರಿಂದ ಲಕ್ಕೇನಹಳ್ಳಿ…

5 hours ago

ಕೆಐಎಡಿಬಿ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರ ಪ್ರತಿಭಟನೆ

ಬೆಂಗಳೂರು ಗ್ರಾಮಾಂತರ: ಸರ್ಕಾರದ ಭೂಸ್ವಾಧೀನ ಪ್ರಕ್ರಿಯೆ ವಿರೋಧಿಸಿ ರೈತರು ಜಿಲ್ಲಾಧಿಕಾರಿ ಕಚೇರಿವರೆಗೆ ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸಿ ಕೆಐಎಡಿಬಿ ಹಾಗೂ…

9 hours ago

ದಿಢೀರ್ ಸಾವುಗಳ ಸುತ್ತಾ…..

ನನ್ನ ಸಾವಿನೊಂದಿಗೆ ಈ ಜಗತ್ತೂ ಇಲ್ಲವಾಗುತ್ತದೆ.......... ದಿಢೀರ್ ಸಾವುಗಳ ಸುತ್ತಾ..... ಇತ್ತೀಚಿನ ಕೆಲವು ಮಾಧ್ಯಮ ವರದಿಗಳನ್ನು ನೋಡುತ್ತಿದ್ದರೆ ಅನೇಕ ಯುವಕ…

14 hours ago

ಜನರ ಸಮಸ್ಯೆಗೆ ಸ್ಪಂದಿಸದ ರೈಲ್ವೆ ಅಧಿಕಾರಿಗಳ ವಿರುದ್ಧ ಗುಡುಗಿದ ಇಂಧನ ಸಚಿವ ಕೆ.ಜೆ ಜಾರ್ಜ್

ಬಾಣಸವಾಡಿ ರೈಲ್ವೆ ನಿಲ್ದಾಣದ ಸಮೀಪ ಒಳಚರಂಡಿ ಕಾಮಗಾರಿ ಕೈಗೊಳ್ಳಲು ಸಹಕರಿಸಿ, ರಾಜ್ಯ ಸರ್ಕಾರದ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವಂತೆ ಕೇಂದ್ರ ಸರ್ಕಾರದ…

1 day ago