ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ: ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿಲ್ಲವೆಂದ ಬಿಜೆಪಿ

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಯುವತಿಯರ ಬಳಿ‌ ಬಂದು ಅಸಭ್ಯವಾಗಿ ವರ್ತಿಸಿ ತಕ್ಷಣ ಸ್ಥಳದಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಸಮೀಪ ನಡೆದಿದೆ.

ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದೆ.

ಸೈಕೋ‌ ಮಾದರಿಯ‌ ಯುವಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರ ಬಳಿಗೆ ಬಂದು ಲೈಂಗಿಕ‌ ಕಿರುಕುಳ ಕೊಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇಬ್ಬರು ಯುವತಿಯರಲ್ಲಿ ಒಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ನಂತರ ಸ್ಥಳದಿಂದ ಓಡಿಹೋಗುತ್ತಾನೆ. ಆ ಬಳಿಕ ಇಬ್ಬರು ಯುವತಿಯರು ಗಾಬರಿಯಿಂದ ಅಲ್ಲಿಂದ ನಡೆದುಕೊಂಡು ಹೋಗುತ್ತಾರೆ.

ಪೊಲೀಸರ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಸಂತ್ರಸ್ತೆ ಸ್ವತಃ ಮುಂದೆ ಬಂದು ದೂರು ದಾಖಲಿಸದಿದ್ದರೆ, ಪೊಲೀಸರು ತಾವಾಗಿಯೇ ಔಪಚಾರಿಕ ದೂರು ದಾಖಲಿಸಿ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆ‌ರ್ ದಾಖಲಿಸುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರವಿರುದ್ಧ ಬಿಜೆಪಿ ಕಿಡಿ

ಈ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ‌ ಖಂಡಿಸಿ‌ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಐಟಿ ಸಿಟಿ ಬೆಂಗಳೂರು ಅನ್ನು ಕಾಂಗ್ರೆಸ್ ಕ್ರೈಮ್‌ ಸಿಟಿ ಬೆಂಗಳೂರು ಮಾಡಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ಅರಾಜಕತೆ ಸೃಷ್ಟಿಸಿರುವ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿಲ್ಲ ಎಂದು ದೂರಿದೆ.

ಡಾ.ಜಿ.ಪರಮೇಶ್ವರ್ ಅವರೇ, ನೀವು ಆಕಸ್ಮಿಕ ಗೃಹ ಸಚಿವರೋ? ಅಥವಾ ಮಾನಸಿಕ ಅಸ್ವಸ್ಥ ಸಚಿವರೋ? ಎಂದು ಪ್ರಶ್ನೆ ಮಾಡಿದೆ.

Ramesh Babu

Journalist

Recent Posts

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ- ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ- ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಹರೀಶ್ ಗೌಡ

ನಾನು ಜೆಡಿಎಸ್ ತಾಲೂಕು ಅಧ್ಯಕ್ಷ ಸ್ಥಾನಕ್ಕಾಗಿ ವರಿಷ್ಠರ ಬಳಿ ಕೇಳಿದ್ದೇನೆ. ಪಕ್ಷದ ಹೈಕಮಾಂಡ್ ತೀರ್ಮಾನಕ್ಕೆ ಬದ್ಧನಾಗಿರುತ್ತೇನೆ. ಪಕ್ಷದ ವರಿಷ್ಠರು ಯಾವುದೇ…

4 hours ago

ಹೆಣ್ಣಿನ‌ ಹಿತರಕ್ಷಣೆಗಾಗಿ ಮಹಿಳಾ ಪೊಲೀಸ್ ಠಾಣೆ ಸದಾ ಸನ್ನದ್ಧ- ಮಹಿಳಾ ಪೊಲೀಸ್ ಠಾಣೆ ಸಬ್ ಇನ್ಸ್ ಪೆಕ್ಟರ್ ಪಂಕಜಾ

ಹೆಣ್ಣಿನ‌ ಹಿತರಕ್ಷಣೆಗಾಗಿ ದೊಡ್ಡಬಳ್ಳಾಪುರದಲ್ಲಿ ಮಹಿಳಾ ಪೊಲೀಸ್ ಠಾಣೆಯನ್ನು ಸ್ಥಾಪನೆ ಮಾಡಲಾಗಿದೆ..ಈ ಮಹಿಳಾ ಠಾಣೆಯಲ್ಲಿ ಅತ್ಯಾಚಾರ, ವರದಕ್ಷಿಣೆ ನಿಷೇಧ ಕಾಯ್ದೆ, ಮಕ್ಕಳ…

8 hours ago

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ ವ್ಯಕ್ತಿತ್ವ ಮತ್ತು ಸಾಧನೆ

ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಹುಟ್ಟು ಹಬ್ಬದ ಮುನ್ನ ( ಏಪ್ರಿಲ್ ‌14 ) ಅವರ ವ್ಯಕ್ತಿತ್ವ ಮತ್ತು…

18 hours ago

Документ_12

In der heutigen akademischen Welt steht die Qualität der schriftlichen Arbeiten im Mittelpunkt des Interesses.…

22 hours ago

‘ಆಸರೆ’ ಯೋಜನೆ: ಒಂಟಿ ಮಹಿಳೆಯರು ಮತ್ತು ಹಿರಿಯ ನಾಗರಿಕರ ಸುರಕ್ಷತೆ, ಭದ್ರತೆ, ಆರೋಗ್ಯ ನೆರವು ಹಾಗೂ ಯೋಗಕ್ಷೇಮ ವಿಚಾರಣೆ

'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…

1 day ago

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು- ಸಿಎಂ ಸಿದ್ದರಾಮಯ್ಯ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ‌ ಸಿದ್ದರಾಮಯ್ಯ ಹೇಳಿದ್ದಾರೆ..…

1 day ago