ರಸ್ತೆಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆ: ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿಲ್ಲವೆಂದ ಬಿಜೆಪಿ

ಬೆಂಗಳೂರು: ಅಪರಿಚಿತ ವ್ಯಕ್ತಿಯೊಬ್ಬ ಯುವತಿಯರ ಬಳಿ‌ ಬಂದು ಅಸಭ್ಯವಾಗಿ ವರ್ತಿಸಿ ತಕ್ಷಣ ಸ್ಥಳದಿಂದ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಟಿಎಂ ಲೇಔಟ್ ಸಮೀಪ ನಡೆದಿದೆ.

ಸ್ಥಳದಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿ ಕ್ಯಾಮೆರಾದಲ್ಲಿ ಕೃತ್ಯ ಸೆರೆಯಾಗಿದೆ.

ಸೈಕೋ‌ ಮಾದರಿಯ‌ ಯುವಕ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಇಬ್ಬರು ಯುವತಿಯರ ಬಳಿಗೆ ಬಂದು ಲೈಂಗಿಕ‌ ಕಿರುಕುಳ ಕೊಡುತ್ತಿರುವುದು ವಿಡಿಯೋದಲ್ಲಿ ಕಾಣಬಹುದು.

ಇಬ್ಬರು ಯುವತಿಯರಲ್ಲಿ ಒಬ್ಬ ಯುವತಿಯ ಖಾಸಗಿ ಅಂಗ ಸ್ಪರ್ಶಿಸಿ ನಂತರ ಸ್ಥಳದಿಂದ ಓಡಿಹೋಗುತ್ತಾನೆ. ಆ ಬಳಿಕ ಇಬ್ಬರು ಯುವತಿಯರು ಗಾಬರಿಯಿಂದ ಅಲ್ಲಿಂದ ನಡೆದುಕೊಂಡು ಹೋಗುತ್ತಾರೆ.

ಪೊಲೀಸರ ಪ್ರಕಾರ, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗಿಲ್ಲ. ಸಂತ್ರಸ್ತೆ ಸ್ವತಃ ಮುಂದೆ ಬಂದು ದೂರು ದಾಖಲಿಸದಿದ್ದರೆ, ಪೊಲೀಸರು ತಾವಾಗಿಯೇ ಔಪಚಾರಿಕ ದೂರು ದಾಖಲಿಸಿ, ಅಪರಿಚಿತ ವ್ಯಕ್ತಿಯ ವಿರುದ್ಧ ಎಫ್‌ಐಆ‌ರ್ ದಾಖಲಿಸುವುದಾಗಿ ಹೇಳಿದ್ದಾರೆ.

ಕಾಂಗ್ರೆಸ್ ಸರ್ಕಾರವಿರುದ್ಧ ಬಿಜೆಪಿ ಕಿಡಿ

ಈ ಘಟನೆಯನ್ನು ರಾಜ್ಯ ಬಿಜೆಪಿ ತೀವ್ರವಾಗಿ‌ ಖಂಡಿಸಿ‌ ಕಾಂಗ್ರೆಸ್ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಐಟಿ ಸಿಟಿ ಬೆಂಗಳೂರು ಅನ್ನು ಕಾಂಗ್ರೆಸ್ ಕ್ರೈಮ್‌ ಸಿಟಿ ಬೆಂಗಳೂರು ಮಾಡಿದೆ.

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಡಿಸಿ ಅರಾಜಕತೆ ಸೃಷ್ಟಿಸಿರುವ ಸಿದ್ದರಾಮಯ್ಯ ಸರ್ಕಾರ ಮಹಿಳೆಯರಿಗೆ ರಕ್ಷಣೆ ನೀಡುತ್ತಿಲ್ಲ ಎಂದು ದೂರಿದೆ.

ಡಾ.ಜಿ.ಪರಮೇಶ್ವರ್ ಅವರೇ, ನೀವು ಆಕಸ್ಮಿಕ ಗೃಹ ಸಚಿವರೋ? ಅಥವಾ ಮಾನಸಿಕ ಅಸ್ವಸ್ಥ ಸಚಿವರೋ? ಎಂದು ಪ್ರಶ್ನೆ ಮಾಡಿದೆ.

Ramesh Babu

Journalist

Recent Posts

ಅಪ್ರಾಪ್ತೆಯ ಮೇಲೆ ಅತ್ಯಾಚಾರ: ಅಪರಾಧಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಬೆಂಗಳೂರು ಗ್ರಾಮಾಂತರ: ಪೋಕ್ಸೋ ಕಾಯ್ದೆಯಡಿ ದಾಖಲಾಗಿದ್ದ ಅತ್ಯಾಚಾರ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ 20 ವರ್ಷಗಳ ಕಠಿಣ ಕಾರಾಗೃಹ…

15 hours ago

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

18 hours ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

24 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

1 day ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

2 days ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

2 days ago