ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರು ಕಾಮಗಾರಿ ಪೂರ್ಣಗೊಂಡಿಲ್ಲ ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ,
ನರಸಾಪುರ ಗ್ರಾಮದಲ್ಲಿ ರಸ್ತೆಯ ಕಾಮಗಾರಿ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಇದುವರೆಗೂ ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ ಮತ್ತು ನಿರಂತರವಾಗಿ ಸುರಿದ ಭಾರಿ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು ಗುಂಡಿಗಳು ನಿರ್ಮಾಣವಾಗಿವೆ ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು
ಇದೇ ವೇಳೆ ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಮಾತನಾಡಿ ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ ಎಂದರು,
ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿ ಆಗಿದ್ದು ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ,
ಇದೇ ಸಂದರ್ಭದಲ್ಲಿ ನರಸಾಪುರ ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್ ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲೂ ಪ್ರಯಾಣಿಕರು, ವಯೋ ವೃದ್ಧರು, ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿಗೆ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರ ಸಾಹಸ ಪಡುತ್ತಿದ್ದಾರೆ ಎಂದು ಆರೋಪಿಸಿದರು.
ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…
ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…
Instant play casinos allow you to play casino games online without installing any software. These…
2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…
ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…
Das Schreiben einer Facharbeit ist ein wichtiger Bestandteil des akademischen Lebens und erfordert sowohl Planung…