Categories: ಕೋಲಾರ

ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಸ್ಥಳೀಯರ ಆಕ್ರೋಶ

ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರು ಕಾಮಗಾರಿ ಪೂರ್ಣಗೊಂಡಿಲ್ಲ ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ,

ನರಸಾಪುರ ಗ್ರಾಮದಲ್ಲಿ ರಸ್ತೆಯ ಕಾಮಗಾರಿ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಇದುವರೆಗೂ ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ ಮತ್ತು ನಿರಂತರವಾಗಿ ಸುರಿದ ಭಾರಿ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು ಗುಂಡಿಗಳು ನಿರ್ಮಾಣವಾಗಿವೆ ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು

ಇದೇ ವೇಳೆ ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಮಾತನಾಡಿ ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ ಎಂದರು,

ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿ ಆಗಿದ್ದು ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ,

ಇದೇ ಸಂದರ್ಭದಲ್ಲಿ ನರಸಾಪುರ ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್ ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲೂ ಪ್ರಯಾಣಿಕರು, ವಯೋ ವೃದ್ಧರು, ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿಗೆ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರ ಸಾಹಸ ಪಡುತ್ತಿದ್ದಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

15 ನೇ ಸೆಪ್ಟೆಂಬರ್ 2026, ವಿಶ್ವ ಅಂತರಾಷ್ಟ್ರೀಯ ಪ್ರಜಾಪ್ರಭುತ್ವದ ದಿನ…

  ಸಂವಿಧಾನದ ಆಶಯಗಳು ಇರುವುದು ಕೇವಲ ಓದುವುದಕ್ಕಾಗಿಯಲ್ಲ, ಅದನ್ನು ಕಾಯಾ ವಾಚಾ ಮನಸಾ ಅನುಸರಿಸಲಿಕ್ಕಾಗಿ.‌ ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ…

2 hours ago

ಗಣೇಶ ಹಬ್ಬದ ಸಂಭ್ರಮದ ನಡುವೆ ಮಸಣವಾದ ಮನೆ: ಅಗ್ನಿ ದುರಂತಕ್ಕೆ ಒಂದೇ ಕುಟುಂಬದ ನಾಲ್ವರು ಬಲಿ

ಬೆಳಗಾವಿ: ಗಣೇಶ ಚತುರ್ಥಿ ದಿನವೇ ಬೆಳಗಾವಿ ನಗರದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಒಂದೇ ಕುಟುಂಬದ ನಾಲ್ವರು ಸಜೀವ ದಹನಗೊಂಡಿರುವ…

4 hours ago

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

16 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

17 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

18 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

22 hours ago