Categories: ಕೋಲಾರ

ರಸ್ತೆಯ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ ಸ್ಥಳೀಯರ ಆಕ್ರೋಶ

ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರು ಕಾಮಗಾರಿ ಪೂರ್ಣಗೊಂಡಿಲ್ಲ ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ,

ನರಸಾಪುರ ಗ್ರಾಮದಲ್ಲಿ ರಸ್ತೆಯ ಕಾಮಗಾರಿ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಇದುವರೆಗೂ ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ ಮತ್ತು ನಿರಂತರವಾಗಿ ಸುರಿದ ಭಾರಿ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು ಗುಂಡಿಗಳು ನಿರ್ಮಾಣವಾಗಿವೆ ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು

ಇದೇ ವೇಳೆ ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಮಾತನಾಡಿ ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ ಎಂದರು,

ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿ ಆಗಿದ್ದು ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ,

ಇದೇ ಸಂದರ್ಭದಲ್ಲಿ ನರಸಾಪುರ ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್ ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲೂ ಪ್ರಯಾಣಿಕರು, ವಯೋ ವೃದ್ಧರು, ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿಗೆ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರ ಸಾಹಸ ಪಡುತ್ತಿದ್ದಾರೆ ಎಂದು ಆರೋಪಿಸಿದರು.

Ramesh Babu

Journalist

Recent Posts

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

3 minutes ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

28 minutes ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

8 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago