ಕೋಲಾರ : ತಾಲೂಕಿನ ನರಸಾಪುರ ಗ್ರಾಮದ ಮುಖ್ಯ ರಸ್ತೆ ಅಗಲೀಕರಣ ಕಾಮಗಾರಿಗೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರು ಕಾಮಗಾರಿ ಪೂರ್ಣಗೊಂಡಿಲ್ಲ ಈ ಅವ್ಯವಸ್ಥೆಯಿಂದ ಗ್ರಾಮದ ಮುಖ್ಯರಸ್ತೆ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸವಾರರು ಸಂಚರಿಸಲು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಗ್ರಾಮಸ್ಥರು ಮತ್ತು ಸಾರ್ವಜನಿಕರು ಆರೋಪಿಸಿದ್ದಾರೆ,
ನರಸಾಪುರ ಗ್ರಾಮದಲ್ಲಿ ರಸ್ತೆಯ ಕಾಮಗಾರಿ ಕೆಲಸಕ್ಕೆ ಗುದ್ದಲಿ ಪೂಜೆ ಮಾಡಿ ವರ್ಷ ಕಳೆದರೂ ಇದುವರೆಗೂ ಕಾಮಗಾರಿ ಕೆಲಸ ಪೂರ್ಣಗೊಳಿಸುವಲ್ಲಿ ವಿಫಲರಾಗಿದ್ದಾರೆ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ನಿರ್ಲಕ್ಷ್ಯ ಮತ್ತು ಅವೈಜ್ಞಾನಿಕ ಕಾರ್ಯ ನಿರ್ವಹಣೆಯಿಂದ ತೀವ್ರ ತೊಂದರೆಯಾಗುತ್ತಿದೆ ಮತ್ತು ನಿರಂತರವಾಗಿ ಸುರಿದ ಭಾರಿ ಮಳೆಗೆ ಮುಖ್ಯ ರಸ್ತೆಗಳೆಲ್ಲ ಹದಗೆಟ್ಟಿದ್ದು ಗುಂಡಿಗಳು ನಿರ್ಮಾಣವಾಗಿವೆ ಇದರಿಂದ ರಸ್ತೆಗಳಲ್ಲಿ ವಾಹನಗಳು ಸುರಕ್ಷಿತವಾಗಿ ಓಡಾಡಲು ಸವಾರರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ ಎಂದು ಆರೋಪಿಸಿದರು
ಇದೇ ವೇಳೆ ನರಸಾಪುರ ಗ್ರಾಮದ ಮುಖಂಡ ಎನ್ ಲೊಕೇಶ್ ಮಾತನಾಡಿ ಗ್ರಾಮದ ಮುಖ್ಯರಸ್ತೆಯ ಅಗಲೀಕರಣದ ಕಾಮಗಾರಿಯ ಗುತ್ತಿಗೆಯನ್ನು ಪಡೆದಂತಹ ಗುತ್ತಿಗೆದಾರನ ವಿಳಂಬ ಕಾಮಗಾರಿಯಿಂದ ನರಸಾಪುರ ಗ್ರಾಮದ ಒಳಗಿನ ಮುಖ್ಯ ರಸ್ತೆಯು ತೀರಾ ಕೆಸರು ಗದ್ದೆಯಂತಾಗಿದ್ದು ವಾಹನಗಳು ಸುರಕ್ಷಿತವಾಗಿ ಸಂಚರಿಸುವುದಕ್ಕಂತೂ ತುಂಬಾ ಕಷ್ಟವಾಗಿದೆ ಇದಕ್ಕೆ ಗುತ್ತಿಗೆದಾರನು ಅನುಸರಿಸುತ್ತಿರುವ ಮಂದಗತಿಯೇ ಕಾರಣವಾಗಿದೆ ಎಂದರು,
ರಸ್ತೆಯ ಅಗಲೀಕರಣದ ಕಾಮಗಾರಿಯ ಕೆಲಸದ ಮಧ್ಯೆ ಧಾರಾಕಾರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ರಸ್ತೆ ಅಗಲೀಕರಣ ಲಕ್ಕಿಂತ ಹಳ್ಳ ಕೊಳ್ಳಗಳೇ ಜಾಸ್ತಿ ಆಗಿದ್ದು ಮಳೆ ನೀರು ತುಂಬಿ ರಸ್ತೆಗಳು ಸಾರ್ವಜನಿಕರು ಓಡಾಡಲು ಕಷ್ಟವಾಗಿದೆ ಕಾಮಗಾರಿಯನ್ನು ಇತ್ತೀಚೆಗೆ ಪ್ರಾರಂಭ ಮಾಡಿದ್ದು ಕಾಮಗಾರಿ ವಿಳಂಬ ರೀತಿಯಲ್ಲಿ ಸಾಗುತ್ತಿದೆ ಇದಕ್ಕೆ ಸಾರ್ವಜನಿಕರು ತುಂಬಾ ಆಕ್ರೋಶ ವ್ಯಕ್ತಪಡಿಸಿದ್ದು ಸಂಬಂಧ ಪಟ್ಟ ಅಧಿಕಾರಿಗಳು ಕಾಮಗಾರಿಯನ್ನು ಬೇಗನೆ ಪೂರ್ಣಗೊಳಿಸುವ ಕ್ರಮ ವಹಿಸಬೇಕೆಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ,
ಇದೇ ಸಂದರ್ಭದಲ್ಲಿ ನರಸಾಪುರ ಗ್ರಾಮದ ಮುಖಂಡ ಅವಿನಾಶ್ ಮಾತನಾಡಿ ಗ್ರಾಮದಲ್ಲಿ ನಡೆಯುತ್ತಿರುವ ರಸ್ತೆ ಅಗಲೀಕರಣ ಕಾರ್ಯದಲ್ಲಿ ಬಸ್ ನಿಲ್ದಾಣವನ್ನು ನೆಲಸಮ ಮಾಡಿ ಪ್ರಯಾಣಿಕರಿಗೆ ತಂಗುದಾಣವಿಲ್ಲದೆ ಕೆಸರು ಗದ್ದೆಯಂತಾಗಿರುವ ರಸ್ತೆಯ ಮಧ್ಯೆ ನಿಂತು ಬಸ್ ಗಳಿಗೆ ಕಾಯುವ ಪರಿಸ್ಥಿತಿ ನಿರ್ಮಾಣವಾಗಿದೆ ಅದರಲ್ಲೂ ಪ್ರಯಾಣಿಕರು, ವಯೋ ವೃದ್ಧರು, ಮತ್ತು ವಿಶೇಷ ಚೇತನರಿಗೆ ಬಸ್ ನಿಲ್ದಾಣವಿಲ್ಲದೆ ಮಳೆ ಬಿಸಿಲು ಗಾಳಿಗೆ ಎನ್ನದೆ ರಸ್ತೆಯ ಮಧ್ಯೆ ನಿಲ್ಲಲು ಪ್ರಯಾಣಿಕರು ಹರ ಸಾಹಸ ಪಡುತ್ತಿದ್ದಾರೆ ಎಂದು ಆರೋಪಿಸಿದರು.
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…
ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…
ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…
ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…
ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…