Categories: ಕೋಲಾರ

ರಸ್ತೆ ಅಗೆದು ವರ್ಷವಾದರೂ ಪೂರ್ಣಗೊಂಡಿಲ್ಲ: ನಿತ್ಯ ಕಿರಿಕಿರಿ ಖಾಜಿಕಲ್ಲಹಳ್ಳಿ ಹರೀಶ್ ಆಕ್ರೋಶ

 

ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು

ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.

Ramesh Babu

Journalist

Recent Posts

ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಅದ್ಧೂರಿಯಾಗಿ ನೆರವೇರಿದ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಬ್ರಹ್ಮರಥೋತ್ಸವ

ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…

8 hours ago

ಜಗತ್ತಿನ ಬೆಳಕಿನ ಹಬ್ಬ – ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ…..

ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…

11 hours ago

ಖಾಸಗಿ ಬಸ್ ಲಾರಿಗೆ ಡಿಕ್ಕಿ: ಹೊತ್ತಿ ಉರಿದ ಬಸ್: 9 ಮಂದಿ ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಬಸ್ ಒಳಗಡೆಯೇ ಸಜೀವ ದಹನ

ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…

11 hours ago

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತ: ವಿದ್ಯುತ್ ಅಡಚಣೆಯಾಗುವ ಪ್ರದೇಶಗಳು ಇಲ್ಲಿವೆ ನೋಡಿ…

ಡಿ.28ರಂದು ದೊಡ್ಡಬಳ್ಳಾಪುರ ನಗರ ಮತ್ತು ತಾಲ್ಲೂಕಿನ ಹಲವೆಡೆ ವಿದ್ಯುತ್​ ಪೂರೈಕೆ ಸ್ಥಗಿತಗೊಳ್ಳಲಿದೆ ಎಂದು ದೊಡ್ಡಬಳ್ಳಾಪು ಉಪವಿಭಾಗದ ಬೆಸ್ಕಾಂ ಅಧಿಕಾರಿಗಳು ಪತ್ರಿಕಾ…

1 day ago

ನಾಳೆ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಮಣ್ಯ ಬ್ರಹ್ಮರಥೋತ್ಸವ: ಬ್ರಹ್ಮ ರಥೋತ್ಸವಕ್ಕೆ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ: ಇಂದು ಕ್ಷೇತ್ರಕ್ಕೆ ಜಿಲ್ಲಾಧಿಕಾರಿ ಎ.ಬಿ ಬಸವರಾಜು ಭೇಟಿ, ಪರಿಶೀಲನೆ

ಇತಿಹಾಸ ಪ್ರಸಿದ್ಧ ದೊಡ್ಡಬಳ್ಳಾಪುರದ ಶ್ರೀ ಘಾಟಿ ಸುಬ್ರಮಣ್ಯ ಕ್ಷೇತ್ರದಲ್ಲಿ ನಾಳೆ(ಡಿಸೆಂಬರ್ 25) ಬ್ರಹ್ಮರಥೋತ್ಸವ ನಡೆಯಲಿದ್ದು, ಕಾರ್ಯಕ್ರಮವನ್ನು ವ್ಯವಸ್ಥಿತವಾಗಿ ನಡೆಸಲು ಜಿಲ್ಲಾಡಳಿತ…

1 day ago