ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು
ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…