Categories: ಕೋಲಾರ

ರಸ್ತೆ ಅಗೆದು ವರ್ಷವಾದರೂ ಪೂರ್ಣಗೊಂಡಿಲ್ಲ: ನಿತ್ಯ ಕಿರಿಕಿರಿ ಖಾಜಿಕಲ್ಲಹಳ್ಳಿ ಹರೀಶ್ ಆಕ್ರೋಶ

 

ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು

ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.

Ramesh Babu

Journalist

Recent Posts

‘SIR ಪ್ರಕ್ರಿಯೆಯಲ್ಲಿ ಗಂಭೀರ ಅಕ್ರಮ ಆರೋಪ: ಸಾಕ್ಷ್ಯಾಧಾರಗಳೊಂದಿಗೆ ಮುಖ್ಯ ಚುನಾವಣಾ ಆಯುಕ್ತರಿಗೆ ದೂರು’- ಆರ್ ಅಶೋಕ್

ದೆಹಲಿಯಲ್ಲಿ ಭಾರತದ ಮುಖ್ಯ ಚುನಾವಣಾ ಆಯುಕ್ತರಾದ ಶ್ರೀ ಜ್ಞಾನೇಶ್ ಕುಮಾರ್ ಅವರನ್ನು ಇಂದು ಕೇಂದ್ರ ಸಚಿವರಾದ ಎಚ್.ಡಿ. ಕುಮಾರಸ್ವಾಮಿ, ಶ್ರೀ…

10 hours ago

ಹಳಿ ದಾಟುವಾಗ ಯುವತಿಗೆ ರೈಲು ಡಿಕ್ಕಿ: ಸ್ಥಳದಲ್ಲೇ ಸಾವು

ದೇವನಹಳ್ಳಿ: ತನ್ನ ಗ್ರಾಮದ ಕಡೆಗೆ ತೆರಳಲು ಹೆದ್ದಾರಿ ಪಕ್ಕದ ರೈಲ್ವೇ ಹಳಿ ದಾಟಲು ಹೋದ ಕಾಲೇಜು ಯುವತಿ ರೈಲಿಗೆ ಸಿಲುಕಿ…

10 hours ago

ಸಚಿವ ಸ್ಥಾನ ನೀಡಿದರೆ ಜವಾಬ್ದಾರಿಯಿಂದ ನಿಭಾಯಿಸುತ್ತೇನೆ- ಶಾಸಕಿ ನಯನಾ ಮೋಟಮ್ಮ

ದೊಡ್ಡಬಳ್ಳಾಪುರ: ಶಾಸಕಿ ನಯನಾ ಮೋಟಮ್ಮ ಅವರು ಮಂಗಳವಾರ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯಕ್ಕೆ ಭೇಟಿ ನೀಡಿ,…

10 hours ago

ಸರ್ಕಾರ ರೈತರೊಂದಿಗೆ ಮಾತುಕತೆ ನಡೆಸಿ, ಎಲ್ಲರ ಸಹಮತದೊಂದಿಗೆ ಮುಂದುವರಿಯಬೇಕು- ವಿನಯ್ ಗುರೂಜಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ಶಾಸಕ ಶರವಣ ಹಾಗೂ ಶ್ರೀ…

10 hours ago

ಶಾಸಕ ಪ್ರದೀಪ್ ಈಶ್ವರ್ ವಿರುದ್ಧ  ಟಿ.ಎ. ಶರವಣ ವಾಗ್ದಾಳಿ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇಗುಲಕ್ಕೆ ವಿಧಾನ ಪರಿಷತ್ ಸದಸ್ಯ ಟಿ.ಎ.…

11 hours ago

ಅತಿವೇಗ: ನಿಯಂತ್ರಣ ತಪ್ಪಿ ಲೈಟ್ ಕಂಬಕ್ಕೆ ಕಾರು ಡಿಕ್ಕಿ – ಕಾರು ನುಜ್ಜುಗೊಜ್ಜು, ಇಬ್ಬರು ಯುವಕರು ಪವಾಡ ರೀತಿಯಲ್ಲಿ ಪಾರು; ದೃಶ್ಯ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ: ಅತಿವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಲೈಟ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರು…

13 hours ago