ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು
ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಕಾವಲಹಳ್ಳಿ ಆಂಜನೇಯ ಸ್ವಾಮಿ ದೇವಸ್ಥಾನ ಸಮೀಪ ಮಂಗಳವಾರ ಸಂಜೆ ಸಿಡಿಲು ಬಡಿದ ಪರಿಣಾಮ ಎರಡು…
ಪರಿಶಿಷ್ಟ ಜಾತಿಗಳಿಗೆ ಒಳಮೀಸಲು ನೀಡುವ ವಿಚಾರದಲ್ಲಿ ನಮ್ಮ ಸರ್ಕಾರವು ಕೈಗೊಂಡಿರುವ ಮಹತ್ವದ ನಿರ್ಧಾರದ ಅನ್ವಯ ಮಾನ್ಯ ಉಚ್ಚ ನ್ಯಾಯಾಲಯದ ಆದೇಶಕ್ಕೆ…
ಪರಿಶಿಷ್ಟ ಪಂಗಡದ ಮಹಿಳಾ ಅಭ್ಯರ್ಥಿಗಳಿಗೆ ನಾಲ್ಕು ವಾರಗಳ ಫ್ಯಾಷನ್ ಡಿಸೈನ್/ಬ್ಯೂಟಿಷಿಯನ್ ಕೌಶಲ್ಯ ಆಧಾರಿತ ಉದ್ಯಮಶೀಲತಾ ಕಾರ್ಯಕ್ರಮವನ್ನು ಮೇ ತಿಂಗಳ ಮೊದಲನೇ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಏ.27ರಂದು ದೊಡ್ಡಬಳ್ಳಾಪುರ…
ನಿಂತಿದ್ದ ಟಾಟಾ ಏಸ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ದುರ್ಮರಣ ಹೊಂದಿರುವ ಘಟನೆ ಇಂದು ಬೆಳಗ್ಗೆ…
ಏ.25ರ ರಾತ್ರಿ ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತದಲ್ಲಿ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿದ್ದರು. ರಸ್ತೆ ಇಕ್ಕೆಲಗಳಲ್ಲಿ ಬೀದಿ ದೀಪಗಳು ಬೆಳಗದ…