Categories: ಕೋಲಾರ

ರಸ್ತೆ ಅಗೆದು ವರ್ಷವಾದರೂ ಪೂರ್ಣಗೊಂಡಿಲ್ಲ: ನಿತ್ಯ ಕಿರಿಕಿರಿ ಖಾಜಿಕಲ್ಲಹಳ್ಳಿ ಹರೀಶ್ ಆಕ್ರೋಶ

 

ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು

ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

48 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago