ಕೋಲಾರ: ತಾಲೂಕಿನ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕೈಗಾರಿಕೆಗಳಿಗಾಗಿ ಕೆಐಎಡಿಬಿ ವತಿಯಿಂದ ಕೆ.ಸಿ ವ್ಯಾಲಿ ನೀರು ಅಳವಡಿಸಲು ಕಾಮಗಾರಿ ನಡೆಯುತ್ತಿದೆ ಆದರೆ ಕಾಮಗಾರಿ ಪ್ರಾರಂಭವಾಗಿ ಒಂದು ವರ್ಷ ಕಳೆದರೂ ಪೂರ್ಣಗೊಂಡಿಲ್ಲ. ಸಾರ್ವಜನಿಕರು ನಿತ್ಯ ಕಿರಿಕಿರಿ ಅನುಭವಿಸುವಂತಾಗಿದೆ. ಕಾಮಗಾರಿಗಾಗಿ ಅಗೆದಿರುವ ರಸ್ತೆಯನ್ನು ಸಂಪೂರ್ಣವಾಗಿ ಮುಚ್ಚಿ ಶೀಘ್ರವಾಗಿ ಕಾಮಗಾರಿ ಪೂರ್ಣಗೊಳಿಸಲು ಜನಪ್ರತಿನಿಧಿಗಳು, ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ಯುವ ಮುಖಂಡ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ಮೂಲಕ ಒತ್ತಾಯಿಸಿದ ಅವರು ಕೋಲಾರ ಜಿಲ್ಲೆಯ ನರಸಾಪುರ ಭಾಗದಲ್ಲಿ ಕೈಗಾರಿಕೆಗಳು ಪ್ರಾರಂಭವಾಗಿ ಜನಸಂದಣಿ ಕೂಡ ಹೆಚ್ಚಾಗಿದೆ ಜೊತೆಗೆ ಸಾವಿರಾರು ಜನ ದಿನನಿತ್ಯ ಕೈಗಾರಿಕೆಗಳಿಗೆ ಕೆಲಸಕ್ಕೆ ಬರುತ್ತಾರೆ ಇಂತಹ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲೇ ಕೈಗಾರಿಗಳಿಗೆ ಕೆ.ಸಿ ವ್ಯಾಲಿ ನೀರು ಒದಗಿಸಲು ರಸ್ತೆ ಅಗೆದು ವರ್ಷವಾಗಿದೆ ಒಂದು ಕಡೆಯ ರಸ್ತೆ ಬಂದ್ ಮಾಡಿ ಮತ್ತೊಂದು ರಸ್ತೆಯಲ್ಲಿ ಮಾತ್ರ ವಾಹನಗಳಿಗೆ ಅವಕಾಶ ನೀಡಿದ್ದಾರೆ ಇದರಿಂದಾಗಿ ದಿನನಿತ್ಯ ಟ್ರಾಫಿಕ್ ಜಾಮ್ ನಿಂದ ಕಾರ್ಮಿಕರು ಸಾರ್ವಜನಿಕರು ಸಾಕಷ್ಟು ತೊಂದರೆ ಅನುಭವಿಸುವಂತಾಗಿದೆ ಕಾಮಗಾರಿ ನೆಪದಲ್ಲಿ ಜನರಿಗೆ ತೊಂದರೆ ನೀಡುವುದು ಸರಿಯಾದ ಕ್ರಮವಲ್ಲ ಕೂಡಲೇ ಅಗೆದಿರುವ ರಸ್ತೆಗಳನ್ನು ಪೂರ್ಣ ಪ್ರಮಾಣದಲ್ಲಿ ಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು
ನರಸಾಪುರ ಕೈಗಾರಿಕಾ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯ ಮೇಲುಸೇತುವೆ ಕಾಮಗಾರಿ ನಡೆಯುತ್ತಿದ್ದು ಇದರಿಂದಾಗಿ ಪ್ರತಿನಿತ್ಯ ಬೆಂಗಳೂರಿಗೆ ಹೋಗಿ ಬರಲು ಸರ್ವಿಸ್ ರಸ್ತೆಯನ್ನು ಬಳಸಬೇಕಾಗಿದೆ ಭಾನುವಾರ ಸಂಜೆ ಕನಿಷ್ಠ ಮೂರು ಕಿಮಿ ದೂರದಷ್ಟು ಟ್ರಾಫಿಕ್ ಜಾಮ್ ನಿಂದಾ ತೊಂದರೆ ಅನುಭವಿಸಲಾಗಿದೆ ಈ ರಸ್ತೆಯಲ್ಲಿಯೇ ಜಿಲ್ಲೆಯ ಸಂಸದರು, ಶಾಸಕರು ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಬೆಂಗಳೂರಿಗೆ ಹೋಗಿಬರಬೇಕಾಗಿದೆ ಈ ರಸ್ತೆಯಲ್ಲಿ ಸಂಚರಿಸುವಾಗ ವೃದ್ಧರು ಮತ್ತು ಮಕ್ಕಳು ಬಿದ್ದು ಗಾಯ ಮಾಡಿಕೊಂಡ ನಿದರ್ಶನಗಳಿವೆ. ಕಾಮಗಾರಿಯ ಬಗ್ಗೆ ಅಧಿಕಾರಿಗಳು ನಿರ್ಲಕ್ಷ್ಯ ತೋರಿದ್ದಾರೆ ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಕಾಮಗಾರಿ ಪೂರ್ಣಗೊಳಿಸಿ ಸುಗಮ ಸಂಚಾರಕ್ಕೆ ಅನುಕೂಲ ಮಾಡಿಕೊಡುವಂತೆ ಖಾಜಿಕಲ್ಲಹಳ್ಳಿ ಹರೀಶ್ ಒತ್ತಾಯಿಸಿದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…