ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.
ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…