ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.
ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.
ಬೆಂಗಳೂರು ಗ್ರಾಮಾಂತರ: ರಾಜ್ಯ ಕಾಂಗ್ರೆಸ್ ನಲ್ಲಿ ಟ್ರಬಲ್ ಶೂಟರ್ ಎಂದೇ ಖ್ಯಾತಿ ಪಡೆದಿರುವ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಹೊಸ ಸರ್ಕಾರ ರಚನೆಯಾದ…
ಸಮಾಜದಲ್ಲಿ ದಲಿತ ಸಮುದಾಯಗಳು ಎದುರಿಸುತ್ತಿದ್ದ ಸಮಸ್ಯೆಗಳ ವಿರುದ್ಧ ಹೋರಾಟ ನಡೆಸಿದ ಪ್ರೊ. ಬಿ ಕೃಷ್ಣಪ್ಪ ಅವರು ಎಲ್ಲರಿಗೂ ಮಾದರಿ. ಅವರ…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ 40 ವರ್ಷಗಳಿಂದ ರಾಜಕಾರಣ ಮಾಡುತ್ತಾ, ಮನೆ ಮಾತಾಗಿರುವ ಹುಸ್ಕೂರು ಟಿ. ಆನಂದ್ ಜೆಡಿಎಸ್ ಪಕ್ಷದಲ್ಲಿ ರಾಜ್ಯ ಪ್ರಧಾನ…
ವೇಶ್ಯಾವಾಟಿಕೆ...... ಒಂದು ವೃತ್ತಿಯೇ, ಜೀವನ ನಿರ್ವಹಣೆಯ ಒಂದು ಮಾರ್ಗವೇ, ಒಂದು ಉದ್ಯೋಗವೇ, ಸಹಜ ಪ್ರಾಕೃತಿಕ ವಿಧಾನವೇ, ಹೆಣ್ಣಿನ ಶೋಷಣೆಯೇ, ಗಂಡಿನ…
ದೊಡ್ಡಬಳ್ಳಾಪುರ: ಮಳೆಗಾಲ ಆರಂಭವಾಗುತ್ತಿದ್ದಂತೆ ದೊಡ್ಡಬಳ್ಳಾಪುರ ನಗರ ಹಾಗೂ ಗ್ರಾಮೀಣ ಭಾಗಗಳ ರಸ್ತೆಗುಂಡಿಗಳ ಸಮಸ್ಯೆ ಮತ್ತೆ ತಲೆದೋರಿದ್ದು, ವಾಹನ ಸವಾರರು ಜೀವ…
ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ರಾತ್ರಿ ದೊಡ್ಡಬಳ್ಳಾಪುರ…