ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.
ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…