ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.
ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.
ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಶ್ರೀ ತೊಗಟವೀರ ಕ್ಷತ್ರಿಯ ಸಮಾಜ ಸೇವಾ ಸಂಘದ ವತಿಯಿಂದ ನಗರದ ಶ್ರೀ ಕೊಂಗಾಡಿಯಪ್ಪ ಕಾಲೇಜು ರಸ್ತೆಯಲ್ಲಿರುವ ಶ್ರೀ ಅಭಯ…
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…