ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟ ಯುವಕ: ಮೃತ ಯುವಕನ ಕಣ್ಣುಗಳನ್ನು ದಾನ‌ ಮಾಡಿದ ಪೋಷಕರು

ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ  ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.

ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಕುಡಿಯುವ ನೀರು, ಮೇವಿಗೆ ಮುಂಜಾಗ್ರತೆ ವಹಿಸಿ: ನಿಗದಿತ ಅವಧಿಯೊಳಗೆ ಬಡವರಿಗೆ ಸೂರು, ಸೈಟ್ ವಿತರಿಸಲು ಸಿದ್ಧತೆ ಮಾಡಿಕೊಳ್ಳಿ- ಸಚಿವ ಕೆ.ಎಚ್ ಮುನಿಯಪ್ಪ

ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…

28 minutes ago

ಶಿಷ್ಟಾಚಾರದ ಹೆಸರಲ್ಲಿ ವಾಗ್ಯುದ್ಧ: ಹಾಲಿ ಶಾಸಕ ಧೀರಜ್ ಮುನಿರಾಜು–ಮಾಜಿ ಶಾಸಕ ವೆಂಕಟರಮಣಯ್ಯ ನಡುವೆ ಬಹಿರಂಗ ಕಿತ್ತಾಟ

ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…

7 hours ago

ನಿಷೇಧದ ನಡುವೆಯೂ ಡಿಜೆ ಬಳಕೆ: ವಾಹನ ವಶ, ಪ್ರಕರಣ ದಾಖಲು

ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…

20 hours ago

ಲಾಡ್ಜ್‌ನಲ್ಲಿ ಮಹಿಳೆ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಕೊಲೆ ಶಂಕಿತ ಪತಿ ಆನಂದ್ ನೇಣಿಗೆ ಶರಣು

ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್‌ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…

22 hours ago

ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯ- ಕೆಪಿಸಿಸಿ ಸದಸ್ಯ ಎಸ್.ಆರ್. ಮುನಿರಾಜ್

ದೊಡ್ಡಬಳ್ಳಾಪುರ: ಕಾಂಗ್ರೆಸ್‌ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…

1 day ago

ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿ ಹುದ್ದೆಗಳ ತಾತ್ಕಾಲಿಕ ಆಯ್ಕೆಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…

2 days ago