ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟ ಯುವಕ: ಮೃತ ಯುವಕನ ಕಣ್ಣುಗಳನ್ನು ದಾನ‌ ಮಾಡಿದ ಪೋಷಕರು

ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.

ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ  ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.

ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

1 day ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

2 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago