ರಸ್ತೆ ಅಪಘಾತದಲ್ಲಿ ಬ್ರೈನ್ ಡೆತ್ ನಿಂದ ಮೃತಪಟ್ಟಿದ್ದ ಯುವಕನ ಕಣ್ಣುಗಳನ್ನು ದಾನ ಮಾಡುವ ಮೂಲಕ ಪೋಷಕರು ಸಾರ್ಥಕತೆ ಮೆರೆದಿದ್ದಾರೆ. ತಿಮ್ಮಸಂದ್ರ ಗ್ರಾಮದ ಯುವಕನ ಸಾವು ಮತ್ತೊಬ್ಬ ವ್ಯಕ್ತಿಯ ಬಾಳಲ್ಲಿ ಬೆಳಕಾಗಿದಕ್ಕೆ ಗ್ರಾಮಸ್ಥರು ಕಂಬನಿ ಮಿಡಿದಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ತಿಮ್ಮಸಂದ್ರ ಗ್ರಾಮದ ಮುನೇಗೌಡ (34) ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದರು. ಆಗಸ್ಟ್ 12 ರ ರಾತ್ರಿ 8 ಗಂಟೆ ಸಮಯದಲ್ಲಿ ಬೈಕ್ ನಲ್ಲಿ ಮನೆಯತ್ತ ಬರುವಾಗ ಸೆಲ್ಫ್ ಆಕ್ಸಿಡೆಂಟ್ ನಲ್ಲಿ ಗಂಭೀರವಾಗಿ ಗಾಯಗೊಂಡಿದ್ದರು. ಚಿಕಿತ್ಸೆಗಾಗಿ ಆತನನ್ನ ಹೆಬ್ಬಾಳದ ಆಸ್ಟರ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬ್ರೈನ್ ಡೆತ್ ಆದ ಹಿನ್ನೆಲೆ ವೈದ್ಯರು ಮುನೇಗೌಡರ ಸಾವನ್ನು ಘೋಷಣೆ ಮಾಡಿದ್ದಾರೆ.
ಮೃತ ಮುನೇಗೌಡರಿಗೆ ಮದುವೆ ನಿಶ್ಚಿತಾರ್ಥವಾಗಿದ್ದ ಇದೇ ತಿಂಗಳು ಮದುವೆ ದಿನವನ್ನ ನಿಶ್ಚಯ ಮಾಡಲಾಗಿತ್ತು. ಆದರೆ, ಮದುವೆ ಮುನ್ನವೇ ಅಪಘಾತದಲ್ಲಿ ಸಾವನ್ನಪ್ಪಿದ್ದು ಕುಟುಂಬದವರ ದುಃಖವನ್ನ ಹೆಚ್ಚು ಮಾಡಿದೆ. ಮಗನ ಸಾವಿನ ದುಃಖದ ನಡುವೆ ಹೆತ್ತವರು ಇಡೀ ದೇಹವನ್ನ ಆಸ್ಪತ್ರೆಗೆ ದಾನ ಮಾಡಲು ತಿರ್ಮಾನ ಮಾಡಿದ್ದರು, ಆದರೆ, ದೇಹದಲ್ಲಿ ಕಣ್ಣುಗಳನ್ನ ದಾನ ಮಾಡಲು ಸೂಕ್ತವಾಗಿದ್ದ ಕಾರಣಕ್ಕೆ ನೇತ್ರದಾನ ಮಾಡಿದ್ದಾರೆ. ಸಾವಿನಲ್ಲೂ ಸಾರ್ಥಕತೆ ಕಂಡ ಮೃತ ಮುನೇಗೌಡರ ಹೆತ್ತವರಿಗೆ ಗ್ರಾಮದ ಮುಖಂಡರು ಮೆಚ್ಚಿಗೆಯನ್ನ ವ್ಯಕ್ತಪಡಿಸಿದ್ದಾರೆ.
ಎಲ್ಲಾ ವರ್ಗದ ಬಡವರಿಗೆ ಸೂರು, ಸೈಟ್ ನೀಡುವುದು ನಮ್ಮ ಸರ್ಕಾರದ ಗುರಿಯಾಗಿದ್ದು ದೇವನಹಳ್ಳಿ ತಾಲ್ಲೂಕು ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ,…
ದೊಡ್ಡಬಳ್ಳಾಪುರ ವಿಧಾನಸಭಾ ಕ್ಷೇತ್ರದ ರಾಜಕೀಯದಲ್ಲಿ ಹಾಲಿ ಶಾಸಕ ಧೀರಜ್ ಮುನಿರಾಜು ಹಾಗೂ ಮಾಜಿ ಶಾಸಕ, ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ಅಧ್ಯಕ್ಷ…
ದೊಡ್ಡಬಳ್ಳಾಪುರ: ಜಿಲ್ಲೆಯಲ್ಲಿ ಡಿಜೆ ಬಳಕೆಗೆ ನಿಷೇಧವಿದ್ದರೂ ಗಣೇಶೋತ್ಸವ ಮೆರವಣಿಗೆಯಲ್ಲಿ ಡಿಜೆ ಬಳಸಿದ ಆರೋಪದ ಮೇರೆಗೆ ಡಿಜೆ ವಾಹನವನ್ನು ಜಪ್ತಿ ಮಾಡಿರುವ…
ದೊಡ್ಡಬಳ್ಳಾಪುರ: ಪತಿಯೊಂದಿಗೆ ಲಾಡ್ಜ್ಗೆ ತೆರಳಿದ್ದ 21 ವರ್ಷದ ಮಹಿಳೆ ಅನುಮಾನಾಸ್ಪದವಾಗಿ ಮೃತಪಟ್ಟ ಪ್ರಕರಣಕ್ಕೆ ಇದೀಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದಲ್ಲಿ…
ದೊಡ್ಡಬಳ್ಳಾಪುರ: ಕಾಂಗ್ರೆಸ್ನಲ್ಲಿ ಒಗ್ಗಟ್ಟು ಅಗತ್ಯವಾಗಿದ್ದು, ಮುಖಂಡರು ಹಾಗೂ ಕಾರ್ಯಕರ್ತರು ಒಟ್ಟಾಗಿ ಕೆಲಸ ಮಾಡಿದರೆ ಮುಂಬರುವ ಎಲ್ಲ ಚುನಾವಣೆಗಳಲ್ಲೂ ಪಕ್ಷದ ಗೆಲುವು…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ತಾತ್ಕಾಲಿಕ ಆಯ್ಕೆ ಪಟ್ಟಿ…