ರಸ್ತೆ ಇಕ್ಕೆಲಗಳಲ್ಲಿ ಅನಧಿಕೃತ ಅಂಗಡಿ, ಶೆಡ್ ಗಳ ಕಾರುಬಾರು: ರಸ್ತೆ ಅಪಘಾತ ಹೆಚ್ಚಳ: ಅನಧಿಕೃತ ಅಂಗಡಿ, ಶೆಡ್ ಗಳ ತೆರವಿಗೆ ಆಗ್ರಹ: ನಿರ್ಲಕ್ಷ್ಯ ವಹಿಸಿದರೆ ಹೋರಾಟದ ಎಚ್ಚರಿಕೆ

ನಗರಾದ್ಯಂತ ಪ್ರತಿಯೊಂದು ಪ್ರಮುಖ ವೃತ್ತಗಳು, ರಸ್ತೆಗಳ ಇಕ್ಕೆಲಗಳಲ್ಲಿ ಅನಧಿಕೃತ ಶೆಡ್ ಗಳು, ಅಂಗಡಿಗಳು ತಲೆಎತ್ತಿವೆ. ಇದರಿಂದ ವಾಹನ ಸವಾರರಿಗೆ, ಪಾದಚಾರಿಗಳಿಗೆ ತೀವ್ರ ತೊಂದರೆಯಾಗುತ್ತಿದೆ. ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಇದಕ್ಕೆಲ್ಲಾ ಕಡಿವಾಣ ಹಾಕಬೇಕಾದ ಇಲಾಖೆಗಳು ಸಂಪೂರ್ಣ ವಿಫಲವಾಗಿವೆ ಎಂದು ಕರವೇ ಪ್ರವೀಣ್ ಶೆಟ್ಟಿ ಬಣದ ಮುಖಂಡ ರಾಜಘಟ್ಟ ರವಿ ಆರೋಪಿಸಿದರು.

ನಗರದ ತಾಲ್ಲೂಕು ಕಚೇರಿ ಆವರಣದಲ್ಲಿ ಈ ಕುರಿತು ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿದರು. ಬಾಶೆಟ್ಟಿಹಳ್ಳಿ ಮೇಲ್ಸೇತುವೆ ಬಳಿ ರಸ್ತೆಯ ಎರಡೂ ಬದಿಗಳಲ್ಲಿ ಬೀದಿ‌ಬದಿ‌ ವ್ಯಾಪಾರಿಗಳು ಫುಟ್ ಪಾತ್ ಗಳನ್ನು ಆಕ್ರಮಿಸಿಕೊಂಡಿದ್ದಾರೆ. ಇವರನ್ನು ಯಾರೂ ಕೇಳೋರಿಲ್ಲ. ಈ ರಸ್ತೆಗೆ ಟೋಲ್ ಬೇರೆ ಕಟ್ಟಬೇಕಾಗಿರುವುದು ದುರಂತ. ಡಾ. ಬಿ.ಆರ್ ಅಂಬೇಡ್ಕರ್ ವೃತ್ತದ ನಾಲ್ಕು ದಿಕ್ಕಿನಲ್ಲಿ ಒಂದಿಂಚೂ ಜಾಗವಿಲ್ಲದಂತೆ ಸುತ್ತಲೂ ಅಂಗಡಿಗಳಿವೆ. ಸಂಬಂಧಪಟ್ಟ ಇಲಾಖೆಗಳಿಗೆ ಕಣ್ಣಿದ್ದು ಜಾಣ ಕುರುಡರಂತೆ ವರ್ತಿಸುತ್ತಿವೆ. ಪಾಲನಜೋಗಿಹಳ್ಳಿಯಲ್ಲಿ ಮಾಂಸದ ಅಂಗಡಿಗಳ ಮಾಲೀಕರು ಲಾರಿಗಳನ್ನು ರಸ್ತೆಗೆ ನಿಲ್ಲಿಸುತ್ತಾರೆ. ಇದರಿಂದ ಹಲವು ಅಪಘಾತಗಳಾಗಿ ಸಾವುನೋವುಗಳಾಗಿವೆ. ನಾಯಿಗಳು ವಾಹನಗಳಿಗೆ ಸಿಲುಕಿ ಸಾವನ್ನಪ್ಪುವುದು ಸಾಮಾನ್ಯವಾಗಿದೆ ಎಂದು ದೂರಿದರು.

ಅಧಿಕಾರಿಗಳಿಗೆ ಮನುಷ್ಯತ್ವ ಇಲ್ಲ:

ತಾಲ್ಲೂಕಿನಲ್ಲಿರುವ ಅಧಿಕಾರಿಗಳಿಗೆ ಕನಿಷ್ಠ ಮನುಷ್ಯತ್ವ ಇಲ್ಲ. ಒಂದೇ ಒಂದು ಸಾರ್ವಜನಿಕ ಸಮಸ್ಯೆಯನ್ನು ಸ್ವಯಂ ಪ್ರೇರಿತರಾಗಿ ಬಗೆಹರಿಸಿದ್ದು ಕಾಣಿಸಿಯೇ ಇಲ್ಲ. ಪ್ರತಿಯೊಂದಕ್ಕೂ ಮನವಿ, ಪ್ರತಿಭಟನೆ ಮಾಡುವಂತ ಪರಿಸ್ಥಿತಿ ಎದುರಾಗಿದೆ. ಇವರಿಗೆ ಸಂಬಳ, ಸಾರಿಗೆ ಎಲ್ಲವೂ ಬೇಕಾಗಿದೆ. ನಗರಸಭೆ ಸದಸ್ಯರು, ಪೌರಾಯುಕ್ತರು ಏನು‌ ಮಾಡುತ್ತಾ ಇದ್ದಾರೆ..? ಎಂದು ಪ್ರಶ್ನೆ ಆಕ್ರೋಶ ವ್ಯಕ್ತಪಡಿಸಿದರು.

ಜೀವ ಕೈಯಲ್ಲಿ ಹಿಡಿದು ಓಡಾಡುವಂತ ಪರಿಸ್ಥಿತಿ ನಿರ್ಮಾಣ:

ನಗರದ ಕೊಂಗಾಡಿಯಪ್ಪ ವೃತ್ತ, ಮುಗುವಾಳಪ್ಪ ವೃತ್ತ, ಡಿ.ಕ್ರಾಸ್, ಸಿದ್ದಲಿಂಗಯ್ಯ ವೃತ್ತ, ರಾಮೇಗೌಡ, ವೃತ್ತ, ತಾಲ್ಲೂಕು ಕಚೇರಿ ವೃತ್ತ, ರೈಲ್ವೆ ನಿಲ್ದಾಣ ಸರ್ಕಲ್ ನಲ್ಲಿ ಸೇರಿ ವಿವಿಧ ವೃತ್ತಗಳಲ್ಲಿ ಜೀವ ಕೈಯಲ್ಲಿಟ್ಟುಕೊಂಡು ಓಡಾಡಬೇಕಾದ ಪರಿಸ್ಥಿತಿ ಇದೆ.

ನಮ್ಮ ಹೋರಾಟ ಬೀದಿ ಬದಿ ವ್ಯಾಪಾರಿಗಳ ವಿರುದ್ಧ ಅಲ್ಲ. ರಸ್ತೆ ಆಕ್ರಮಿಸಿಕೊಂಡವರ ವಿರುದ್ಧದ ಹೊರಾಟ. ಫುಟ್ ಪಾತ್ ನಲ್ಲಿ ಶೆಡ್ ನಿರ್ಮಿಸಿ‌ ಬಾಡಿಗೆಗೆ ಕೊಟ್ಟಿದ್ದಾರೆ. ಇದ್ಯಾವುದೂ ಅಧಿಕಾರಿಗಳಿಗೆ ಕಾಣುತ್ತಿಲ್ಲ ಎಂದರು.

ರಸ್ತೆ ಮಧ್ಯೆ ಕುಳಿತು ಹೋರಾಟದ ಎಚ್ಚರಿಕೆ:

ಬೀದಿ ಬದಿ‌ವ್ಯಾಪರಿಗಳಿಗೆ ಕೆಲವು ನಿಬಂಧನೆಗಳಿವೆ ಅವುಗಳ ಪ್ರಕಾರ ವ್ಯಾಪಾರ ವಹಿವಾಟು ಮಾಡಲಿ. ಲಾಡ್ಜ್ ಗಳ ಮೇಲೆ ಪೊಲೀಸರು ದಾಳಿ ಮಾಡಬೇಕು. ರಸ್ತೆಗಳಲ್ಲಿ ತೃತೀಯ ಲಿಂಗಗಳ ಕಾಟಕ್ಕೆ ಕಡಿವಾಣ ಹಾಕಬೇಕು. ಇಲ್ಲವಾದಲ್ಲಿ ಅನಿರ್ದಿಷ್ಟಾವಧಿ ರಸ್ತೆ ಮಧ್ಯೆ ಕುಳಿತು ಹೋರಾಟ ಮಾಡಲಾಗುವುದು. ಶಾಸಕರು, ಪೌರಾಯುಕ್ತರು, ನಗರಸಭೆ ಅಧ್ಯಕ್ಷರು, ಡಿವೈಎಸ್ಪಿ, ಪಿಡ್ಬ್ಲೂಡಿ, ಕಂದಾಯ ಇಲಾಖೆ ಅಧಿಕಾರಿಗಳು, ಸಂಘ ಸಂಸ್ಥೆಗಳ ಸಭೆ ಕರೆದು ಸೂಕ್ತವಾಗಿ ವ್ಯವಸ್ಥಿತ ನಿರ್ವಹಣೆ ಮಾಡಬೇಕು ಎಂದರು.

ಕಾರ್ಮಿಕ ಘಟಕದ ಅಧ್ಯಕ್ಷ ಮಹೇಶ್ ಮಾತನಾಡಿ ಬಾಶೆಟ್ಟಿಹಳ್ಳಿ ಬಳಿಯ ಹೆದ್ದಾರಿ ಪಕ್ಕದಲ್ಲಿ ರಸ್ತೆ ಬಳಿ ಸರ್ವೀಸ್ ರಸ್ತೆ ಇಲ್ಲ. ಪ.ಪಂ. ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ದೊಡ್ಡಬಳ್ಳಾಪುರದಲ್ಲೂ‌ ಕೇಳೋರೇ ಇಲ್ಲ. ವ್ಯಾಪಾರಿಗಳಿಗೆ, ಮಾಂಸದಂಗಡಿಗಳಿಗೆ ಪ್ರತ್ಯೇಕ ಜಾಗ ಕೊಡಬೇಕು ಹೀಗೆ ಮುಂದುವರೆದರೆ ಉಗ್ರ ಹೋರಾಟ ಮಾಡಲಾಗುತ್ತದೆ ಎಂದರು‌.

ಕರವೇ ತಾ. ಅಧ್ಯಕ್ಷ ಹಮಾಮ್ ವೆಂಕಟೇಶ್, ಪ್ರಧಾನ ಕಾರ್ಯದರ್ಶಿ ಎಸ್.ಎಲ್.ಎನ್ ವೇಣು, ಉಪಾಧ್ಯಕ್ಷ ಜೋಗಳ್ಳಿ ಅಮ್ಮು, ತಾಲ್ಲೂಕು ಕಾರ್ಯದರ್ಶಿ ಕಾರಳ್ಳಿ ಮಂಜುನಾಥ, ಖಜಾಂಚಿ ಆನಂದ ಮೂರ್ತಿ, ನಗರಾಧ್ಯಕ್ಷ ಬಷೀರ್, ನಗರ ಕಾರ್ಯದರ್ಶಿ ಮಾರುತಿ, ಸೂರಿ, ಸುಬ್ರಮಣ್ಯ, ರಘುನಂದನ್, ರಂಗಸ್ವಾಮಿ, ಮಂಜುನಾಥ ಸೇರಿದಂತೆ ಇತರರು ಇದ್ದರು.

Ramesh Babu

Journalist

Recent Posts

ಗುಂಡಿ ರಸ್ತೆಗೆ ಕೆಎಸ್‌ಆರ್‌ಟಿಸಿ ಬಸ್‌ಗಳೇ ಬಲಿಪಶು: ಹದಗೆಟ್ಟ ರಸ್ತೆ–ನಿರ್ವಹಣೆ ಕೊರತೆ; ಮಾರ್ಗಮಧ್ಯೆಯೇ ಕೆಟ್ಟು ನಿಲ್ಲುವ ಬಸ್‌ಗಳಿಂದ ಪ್ರಯಾಣಿಕರ ಪರದಾಟ

ದೊಡ್ಡಬಳ್ಳಾಪುರ: ತಾಲೂಕಿನ ಗ್ರಾಮೀಣ ಭಾಗಗಳಲ್ಲಿ ಹದಗೆಟ್ಟಿರುವ ರಸ್ತೆಗಳು ಹಾಗೂ ಸಮರ್ಪಕ ನಿರ್ವಹಣೆ ಇಲ್ಲದ ಕೆಎಸ್‌ಆರ್‌ಟಿಸಿ ಬಸ್‌ಗಳಿಂದಾಗಿ ಸಾರ್ವಜನಿಕರು ನಿತ್ಯವೂ ಪರದಾಡುವಂತಾಗಿದೆ.…

10 hours ago

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

10 hours ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

11 hours ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

16 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

22 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago