ದಾಬಸ್ಪೇಟೆ ಪಂಚಾಯಿತಿ ವ್ಯಾಪ್ತಿಯಲ್ಲಿ ಸಮಪರ್ಕ ತ್ಯಾಜ್ಯ ವಿಲೇವಾರಿಯಾಗದ ಕಾರಣ ದಾಬಸ್ಪೇಟೆ ಮುಖ್ಯ ರಸ್ತೆಯ ನೀಡವನದ ಹೈವೆ ಪಕ್ಕ ಇರುವ ಸರ್ವಿಸ್ ರಸ್ತೆ ಇಕ್ಕೆಲಗಳಲ್ಲಿ ರಾಶಿಗಟ್ಟಲೇ ಕಸ ಸುರಿಯುತ್ತಿರುವುದರಿಂದ ಗಬ್ಬೆದ್ದು ನಾರುತ್ತಿದೆ.
ಕೋಳಿ ತ್ಯಾಜ್ಯ, ಹೋಟೆಲ್ ತ್ಯಾಜ್ಯ, ಕೊಳೆತ ತರಕಾರಿ ತ್ಯಾಜ್ಯ, ಪ್ಲಾಸ್ಟಿಕ್ ಸೇರಿದಂತೆ ಇತರೆ ತ್ಯಾಜ್ಯವನ್ನು ರಸ್ತೆಯಲ್ಲಿ ಹಾಕಲಾಗುತ್ತಿದೆ. ಈ ರಸ್ತೆಯಲ್ಲಿ ಪ್ರತಿದಿನ ಸಾವಿರಾರು ಸಂಖ್ಯೆಯಲ್ಲಿ ಜನ ಓಡಾಡುತ್ತಾರೆ. ಸದ್ಯ ಈ ತ್ಯಾಜ್ಯ ಗಬ್ಬೆದ್ದು ನಾರುತ್ತಿದ್ದು, ಮೂಗು ಮುಚ್ಚಿಕೊಂಡು ಜನ ಓಡಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಈ ತ್ಯಾಜ್ಯದಿಂದ ಸಾಂಕ್ರಾಮಿಕ ರೋಗ ಬರುವ ಸಾಧ್ಯತೆ ಇದೆ. ತ್ಯಾಜ್ಯ ತಿನ್ನಲು ನೂರಾರು ನಾಯಿಗಳು ಇಲ್ಲಿ ಜಮಾಯಿಸುತ್ತವೆ. ನಾಯಿಗಳು ಒಂದೊಕ್ಕೊಂದು ಕಚ್ಚಾಡುತ್ತ ರಸ್ತೆಗೆ ಬರುತ್ತವೆ. ಆಗ ವಾಹನ ಸವಾರರು ಅಪಘಾತಗಳಿಂದಾಗಿ ಸಾವು-ನೋವು ಅನುಭವಿಸುತ್ತಿದ್ದಾರೆ. ಇರುವ ಕಸ ವಿಲೇವಾರಿ ಮಾಡಲು, ಇನ್ನೂ ಮುಂದೆ ರಸ್ತೆ ಇಕ್ಕೆಲಗಳಲ್ಲಿ ಕಸ ಹಾಕದಂತೆ ಸೂಚನಾ ಫಲಕಗಳನ್ನು ಅಳವಡಿಸುವಂತೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದರೂ ಏನೂ ಪ್ರಯೋಜನವಾಗಿಲ್ಲ ಎಂದು ಸ್ಥಳೀಯ ಆಟೋ ಡ್ರೈವರ್ ಪ್ರೇಮ್ ಕುಮಾರ್ ದೂರಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷರಾಗಿ ಎಸ್ ಯು ರಮೇಶ್ ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಜಿಲ್ಲಾಧ್ಯಕ್ಷ ನರೇಶ್ ನೇತೃತ್ವದಲ್ಲಿ ನಗರದ…
ಬೆಳಗಾವಿಯ ಸಂಕೇಶ್ವರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ ನಡೆದಿದೆ. ಅಂತಾರಾಜ್ಯ ಇಬ್ಬರು ಬೈಕ್ ಕಳ್ಳರನ್ನು ಬಂಧಿಸಲಾಗಿದೆ. ಬಂಧಿತರಿಂದ 18.30 ಲಕ್ಷ ಮೌಲ್ಯದ…
ಯುದ್ಧದ ವಿರುದ್ಧವೇ ಯುದ್ಧ ಸಾರಬೇಕಿದೆ, " War against war... " ಅಸಹಾಯಕರ ನೋವಿನ ಧ್ವನಿ,... ದಯವಿಟ್ಟು ಬನ್ನಿ ಭಾಗವಹಿಸಿ......…
ಇಬ್ಬರು ಸ್ನೇಹಿತರು ಕೆರೆಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ರಾಮಸಮುದ್ರ ಕೆರೆಯಲ್ಲಿ…
ಮದುವೆ ಮಾಡಿಕೊಳ್ಳಲು ಹೆಣ್ಣು ಸಿಗುತ್ತಿಲ್ಲವೆಂದು ಮನನೊಂದು ಒಂದೇ ದಿನ ರಾಜ್ಯದ ಇಬ್ಬರು ಯುವಕರು ಆತ್ಮಹತ್ಯೆಗೆ ಶರಣಾಗಿರುವ ದಾರುಣ ಘಟನೆಗಳು ಚಿಕ್ಕಮಗಳೂರು…
ನಮ್ಮ ಮನೆ ದೇವರಾದ ರಾಮೇಶ್ವರ–ಸಿದ್ದೇಶ್ವರ ಸ್ವಾಮಿಗಳ ಆಶೀರ್ವಾದದಿಂದಲೇ ರಾಜ್ಯದಲ್ಲಿ ಎರಡು ಬಾರಿ ಮುಖ್ಯಮಂತ್ರಿಯಾಗಿ ಹಾಗೂ ಎರಡು ಬಾರಿ ವಿಪಕ್ಷ ನಾಯಕನಾಗಿ…